Malenadu Mitra
ರಾಜ್ಯಶಿವಮೊಗ್ಗಸಾಗರಸೊರಬ

ಶಿವಮೊಗ್ಗ ನಗರದಲ್ಲಿ ಕೊರೊನ ಹೆಚ್ಚಳ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಮಂಗಳವಾರವೂ133 ಪ್ರಕರಣಗಳು ದಾಖಲಾಗಿದ್ದು, ಸತತ ನಾಲ್ಕನೇ ದಿನ ಶತಕದಾಟಿದೆ. ಓಂ ಶಕ್ತಿ ಭಕ್ತರಿಂದ ಆಮದಾದ ಸೋಂಕು ಈಗ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ಭಕ್ತರಿಂದ ಬರುತ್ತಿರುವ ಪ್ರಕರಣಗಳ ಅಂಕಿಸಂಕಿಗಳನ್ನು ಪ್ರತ್ಯೇಕವಾಗಿ ತೋರಿಸದೆ ಜಾಣತನ ತೋರಿಸುತ್ತಿದ್ದಾರೆನ್ನಲಾಗಿದೆ. ಒಟ್ಟಾರೆಯಾಗಿ ಈಗ ದಾಖಲೆ ತೋರಿಸುತ್ತಿದ್ದು, ಶಿವಮೊಗ್ಗ ನಗರದಲ್ಲಿ ಒಂದೇ ದಿನ 84 ಪ್ರಕರಣಗಳು ದಾಖಲಾಗಿವೆ. ಭದ್ರಾವತಿಯಲ್ಲಿ 20 ತೀರ್ಥಹಳ್ಳಿ 6, ಶಿಕಾರಿಪುರ 5, ಸಾಗರ 11 , ಹೊಸನಗರ3 ,ಸೊರಬದಲ್ಲಿ 4 ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 548 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ನಾಯಕತ್ವ ಬೆಳವಣಿಗೆಗೆ ಎನ್ಎಸ್ಎಸ್ ಸಹಕಾರಿ : ಭೀಮಣ್ಣ ಕೆ.ನಾಯ್ಕ್

Malenadu Mirror Desk

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk

ವ್ಯಕ್ತಿತ್ವ ಇರುವವರಿಂದ ಮಾತ್ರ ಕಟ್ಟುವ ಕೆಲಸ ಸಾಧ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.