Malenadu Mitra
ರಾಜ್ಯಶಿವಮೊಗ್ಗಹೊಸನಗರ

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕೌಟಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿದರಹಳ್ಳಿ ಗ್ರಾಮದ ವಿದ್ಯಾ(೩೨) ಎಂಬ ಮಹಿಳೆ ತನ್ನ ೪ ವರ್ಷದ ತನ್ವಿ ಜೊತೆ ಮನೆಯ ಹಿಂಬದಿ ಇರುವ ೫೦ ಅಡಿ ಅಳದ ಬಾವಿಗೆ ಹಾರಿ ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ವಿದ್ಯಾ ಬಾವಿಗೆ ಬೀಳುತ್ತಿದ್ದಂತೆಯೇ ಮನೆಯವರು ಹೊಸನಗರ ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ನೋಡುವಷ್ಟರಲ್ಲಿ ತಾಯಿ-ಮಗಳು ಇಬ್ಬರೂ ಮೃತಪಟ್ಟಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ ಭೀಷ್ಮಾಚಾರಿ ೫೦ ಅಡಿ ಅಳದಿಂದ ತಾಯಿ – ಮಗಳ ಶವ ಮೇಲಕ್ಕೆ ಎತ್ತಿದ್ದಾರೆ. ಈ ತಂಡದಲ್ಲಿ ಠಾಣಾಧಿಕಾರಿ ರಾಜಪ್ಪ ಕೆ.ಟಿ ಹಾಗೂ ಸಿಬ್ಬಂದಿ ಸುರೇಶ್, ರಾಜೇಶ್ ಇದ್ದರು. ಹೊಸನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Ad Widget

Related posts

ದೇವಸ್ಥಾನ ಸ್ವತಂತ್ರವಾದರೆ ಡಿಕೆಶಿಗೆ ಏಕೆ ಉರಿ: ಈಶ್ವರಪ್ಪ ಕಿಡಿ

Malenadu Mirror Desk

ಕಣ್ಣು,, ಕಿವಿ, ಬಾಯಿ ಇಲ್ಲದ ಸರ್ಕಾರ: ಸಂಸದ ರಾಘವೇಂದ್ರ,ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ

Malenadu Mirror Desk

ಅರಣ್ಯ ಹಕ್ಕು ಕಾಯ್ದೆ ದಾಖಲೆ ಅವಧಿ ವಿನಾಯಿತಿಗೆ ಪ್ರಸ್ತಾವನೆ, ಸಿಎಂ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಾಮರ್ಶೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.