Malenadu Mitra
ರಾಜ್ಯಶಿವಮೊಗ್ಗಹೊಸನಗರ

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕೌಟಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿದರಹಳ್ಳಿ ಗ್ರಾಮದ ವಿದ್ಯಾ(೩೨) ಎಂಬ ಮಹಿಳೆ ತನ್ನ ೪ ವರ್ಷದ ತನ್ವಿ ಜೊತೆ ಮನೆಯ ಹಿಂಬದಿ ಇರುವ ೫೦ ಅಡಿ ಅಳದ ಬಾವಿಗೆ ಹಾರಿ ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ವಿದ್ಯಾ ಬಾವಿಗೆ ಬೀಳುತ್ತಿದ್ದಂತೆಯೇ ಮನೆಯವರು ಹೊಸನಗರ ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ನೋಡುವಷ್ಟರಲ್ಲಿ ತಾಯಿ-ಮಗಳು ಇಬ್ಬರೂ ಮೃತಪಟ್ಟಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ ಭೀಷ್ಮಾಚಾರಿ ೫೦ ಅಡಿ ಅಳದಿಂದ ತಾಯಿ – ಮಗಳ ಶವ ಮೇಲಕ್ಕೆ ಎತ್ತಿದ್ದಾರೆ. ಈ ತಂಡದಲ್ಲಿ ಠಾಣಾಧಿಕಾರಿ ರಾಜಪ್ಪ ಕೆ.ಟಿ ಹಾಗೂ ಸಿಬ್ಬಂದಿ ಸುರೇಶ್, ರಾಜೇಶ್ ಇದ್ದರು. ಹೊಸನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Ad Widget

Related posts

ಮಲೆನಾಡಿಗೆ ಮತ್ತೆ ಒಕ್ಕರಿಸಿದ ಮಂಗನಕಾಯಿಲೆ

Malenadu Mirror Desk

ಹಂದಿ ಅಣ್ಣಿ ಮೇಲೆ ಸೇಡಿದ್ದವರ ಸಿಂಡಿಕೇಟ್ ನಿಂದಲೇ ಕೊಲೆ, ಶತ್ರುವಿನ ಶತ್ರುಗಳೆಲ್ಲ ಒಂದಾಗಿ ಅಟ್ಯಾಕ್ ಮಾಡಿದ್ದಾರೆಂಬುದು ಪೊಲೀಸರ ಅನುಮಾನ

Malenadu Mirror Desk

ಗ್ರಾಮೀಣ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.