Malenadu Mitra
ರಾಜ್ಯಶಿವಮೊಗ್ಗ

ಹರ್ಷ ಕೊಲೆ: ಮತ್ತಿಬ್ಬರ ಬಂಧನ, ನಾಪತ್ತೆಯಾದ ಹರ್ಷನ ಮೊಬೈಲ್‌ನಲ್ಲಿದೆಯೇ ಕೊಲೆ ರಹಸ್ಯ ?

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಬೆನ್ನಲ್ಲೆ ಹತ್ಯೆ ಆರೋಪದ ಮೇಲೆ ಶೀವಮೊಗ್ಗದ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಫರಾಜ್ ಪಾಶಾ
ಜಿಲಾನ್

ಶಿವಮೊಗ್ಗದ ಇಲಿಯಾಸ್ ನಗರದ ಫರಾಜ್ ಪಾಶಾ(24) ಮತ್ತು ವಾದಿ-ಎ-ಹುದಾ ಬಡಾವಣೆಯಲ್ಲಿ ಅಬ್ದುಲ್ ಖಾದರ್ ಜಿಲಾನ್(25) ಬಂಧಿತ ಆರೋಪಿಗಳಾಗಿದ್ದಾರೆ. ಇವಲ್ಲಿ ಜಿಲಾನ್ ವಾಹನ ಚಾಲಕನಾಗಿ ಕಾರ್ಯನಿರ್ವಹಿಸಿದರೆ, ಫರಾಜ್ ಮಾಹಿತಿದಾರನಾಗಿ ಕೆಲಸ ಮಾಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬುಧವಾರ ಈ ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ನ್ಯಾಯಾಂಗ ಬಂಧನ:
ಮಂಗಳವಾರ ಬಂಧಿಸಿದ್ದ ಎಲ್ಲಾ ೬ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲರಿಗೂ ನ್ಯಾಯಾಲಯು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ನಡುವೆ ಹರ್ಷನ ಮೊಬೈಲ್ ವಿಡಿಯೊ ಕಾಲ್ ಮಾಡಿದ ಹುಡುಗಿಯರು ಯಾರು ಎಂಬ ಬಗ್ಗೆ ಇಲಾಖೆ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಹರ್ಷನ ಬಳಿಯಿದ್ದ ಮೊಬೈಲ್ ಕೂಡಾ ನಾಪತ್ತೆಯಾಗಿದ್ದು, ಆರೋಪಿಗಳೇ ಅದನ್ನು ಕಿತ್ತುಕೊಂಡಿರಬಹುದಾ ಎಂಬ ಶಂಕೆಯೂ ಪೊಲೀಸರಿಗಿದೆ.

Ad Widget

Related posts

ಆದರ್ಶಗಳನ್ನು ಅನುಸರಿಸದೇ ಪ್ರತಿಪಾದಿಸುವುದು ಕೂಡಾ ಭ್ರಷ್ಟಾಚಾರ: ಪ್ರಸನ್ನ

Malenadu Mirror Desk

ಶಿವಮೊಗ್ಗ ಜಿಲ್ಲೆಯಲ್ಲಿ 129 ಮಂದಿಯಲ್ಲಿ ಕೊರೊನ

Malenadu Mirror Desk

ತುಮರಿ ಸಮೀಪ ಮೈಸೂರು ಜಿಲ್ಲೆ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ, ಹತ್ತು ಮಕ್ಕಳಿಗೆ ಗಾಯ, ನೆರವಿಗೆ ಬಂದು ಮಾನವೀಯತೆ ಮೆರೆದ ಸ್ಥಳೀಯ ನಿವಾಸಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.