Malenadu Mitra
ರಾಜ್ಯಶಿವಮೊಗ್ಗ

ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭ

ಕಳೆದ ಒಂದು ವಾರದಿಂದ ಬಂದ್ ಆಗಿದ್ದ ಶಿವಮೊಗ್ಗ ನಗರದ ಶಾಲಾ ಕಾಲೇಜು ಆರಂಭವಾಗಲಿವೆ.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಈ ಆದೇಶ ಹೊರಡಿಸಿದ್ದಾರೆ. ಹಿಜಾಬ್ -ಕೇಸರಿ ಶಾಲು ಗಲಾಟೆ ,ಅದಾದ ಬಳಿಕ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದಾಗಿ ನಗರದಲ್ಲಿ ಕರ್ಫ್ಯೂ ವಿದಿಸಲಾಗಿತ್ತು

. ನಗರದಲ್ಲಿ ಕಳೆದ ಹದಿನೈದು ದಿನಗಳಿಂದ ಸರಿಯಾಗಿ ಶಾಲಾ ಕಾಲೇಜುಗಳು ನಡೆದಿರಲಿಲ್ಲ. ಇದರಿಂದ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆಗಳಿಗೂ ತೊಂದರೆ ಯಾಗಿತ್ತು. ಎರಡು ವರ್ಷಗಳಿಂದ ಕೊರೊನ ಸಮಯದಲ್ಲಿ ಮಕ್ಕಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮವಾಗಿತ್ತು. ಈಗ ಈ ಗಲಭೆಗಳ ಕಾರಣಕ್ಕೆ ಶಾಲಾ ಕಾಲೇಜುಗಳು ಬಂದ್ ಆಗಿದ್ದವು.

ಸೋಮವಾರದಿಂದ ಕಾಲೇಜು ಆರಂಬಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದು, ನಾಗರೀಕರು ಶಾಂತಿ ಸುವ್ಯವಸ್ಥೆಗೆ ಆದ್ಯತೆ ನೀಡಬೇಕಿದೆ

Ad Widget

Related posts

ಸಾರ್ವಜನಿಕರ ಸೇವೆಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ-ಡಾ.ಸಿದ್ದನಗೌಡ

Malenadu Mirror Desk

ಸೊರಬದಲ್ಲಿ ದಸರಾ ಉತ್ಸವಕ್ಕೆ ಭವ್ಯ ತೆರೆ

Malenadu Mirror Desk

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.