Malenadu Mitra
ರಾಜ್ಯಶಿವಮೊಗ್ಗ

ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಬಂಧನ

ಶಿವಮೊಗ್ಗ: ಜನರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಅರ್ಷದ್ ಖಾನ್ ಎಂಬಾತನ ಕಾಲಿಗೆ ಗುಂಡು ಹೊಡೆದ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಿನಕಟ್ಟೆ ಸಮೀಪ ಈ ಘಟನೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಶಿಕ್ಷೆಯಾದರೂ ಕೂಡ, ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಪಡೆದು ಓಡಾಡುತ್ತಿದ್ದ ಅರ್ಷದ್ ಎಂಬಾತ, ಚಾಕು ತೋರಿಸುತ್ತಾ ಜನರನ್ನು ದರೋಡೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆತನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಮುಂದ್ದಾಗಿದ್ದಾನೆ.
ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದನ್ನ ಗಮನಿಸಿದ ಇನ್ಸ್‌ಪೆಕ್ಟರ್ ಮಂಜುನಾಥ್, ಅರ್ಷದ್ ಕಾಲಿಗೆ ಗುಂಡು ಹಾರಿಸಿ, ಆತನನ್ನು ಹಿಡಿದಿದ್ದಾರೆ. ಬುದ್ದನಗರ ನಿವಾಸಿಯಾಗಿರುವ ಅರ್ಷದ್ ಮೇಲೆ ಕೋಟೆ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಆ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯು ಆಗಿತ್ತು. ಸುಪ್ರೀಂಕೋರ್ಟ್‌ನಲ್ಲಿ ಬೇಲ್ ತೆಗೆದುಕೊಂಡು ಬಂದಿರುವ ಅರ್ಷದ್ ಶಿವಮೊಗ್ಗದಲ್ಲಿ ಸುಲಿಗೆ, ದರೋಡೆ, ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Related posts

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ: ಸಚಿವ ಮಧುಬಂಗಾರಪ್ಪ,ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವ ಮಧುಬಂಗಾರಪ್ಪನವರಿಗೆ ಅಭಿನಂದನೆ

Malenadu Mirror Desk

ಎಣ್ಣೆ, ದಿನಸಿ ಇಂದೇ ಖರೀದಿಸಿ, ತಪ್ಪಿದರೆ ಒಂದು ವಾರ ನಿಮಗೆ ಸಿಗಲ್ಲ ಶಿವಮೊಗ್ಗದಲ್ಲಿ ಜೂ.6ರತನಕ ಸಂಪೂರ್ಣ ಲಾಕ್‍ಡೌನ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.