Malenadu Mitra
ರಾಜ್ಯಶಿವಮೊಗ್ಗ

ಪೊಲೀಸ್ ಪೇದೆ ಎದೆಗೆ ಚಾಕು ಹಾಕಿದ್ದ ಆರೋಪಿಯ ಕಾಲಿಗೆ ಫೈರಿಂಗ್ ಮೆಗ್ಗಾನ್‌ನಲ್ಲಿ ಚಿಕಿತ್ಸೆ, ಪೇದೆಗೆ ಗಾಯ

ಶಿವಮೊಗ್ಗ,ಜೂ.೨೧: ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಹಾಕಿದ್ದ ರೌಡಿ ಶಾಹಿದ್ ಖುರೇಶಿ(೨೨)ಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಉಪಟಳದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳವಾರ ಬೆಳಗ್ಗೆ ಆತನನ್ನು ಹಿಡಿಯಲು ಹೋದ ಸಂದರ್ಭ ಆತ ಪೊಲೀಸರ ಮೇಲೆ ಎರಗಿದ್ದು, ಈ ವೇಳೆ ಗುರುನಾಯ್ಕ್ ಎಂಬ ಪೊಲೀಸ್ ಪೇದೆ ಎದೆಗೆ ಚಾಕುವಿನಿಂದ ಚುಚ್ಚಿದ್ದ. ಈ ವಿಚಾರ ಪೊಲೀಸ್ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಗಾಯಾಳು ಪೇದೆಯನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮಧ್ಯಾಹ್ನ ಖುರೇಶಿಯನ್ನು ಬಂಧಿಸಲು ಹೋದ ಸಂದರ್ಭ ಆತ ಮತ್ತೆ ಪೊಲೀಸರ ಮೇಲೆ ಲಾಂಗು ಬೀಸಲು ಮುಂದಾದ ಈ ಸಂದರ್ಭ ಆತ್ಮ ರಕ್ಷಣೆಗೆ ಮುಂದಾದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ.

Ad Widget

Related posts

ದೇಶಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಇನ್ವಿಸ್ಟಿಗೇಷನ್ ಯಾವುದು ಗೊತ್ತಾ?
ಇಂಡಿಯಾ ಸೈಬರ್ ಕಾಪ್ ಅವಾರ್ಡ್ ಅಂತಿಮ ಸುತ್ತಿಗೆ ಇನ್ಸ್ ಪೆಕ್ಟರ್ ಗುರುರಾಜ್

Malenadu Mirror Desk

ಅಮ್ಮ.. ನಮ್ಮನ್ನು ಕೊಂದು ಬಿಟ್ಟೆಯಾ ?..

Malenadu Mirror Desk

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ; ಹಾನಿ ಪರಿಶೀಲನೆ,418 ಕೋಟಿ ರೂ.ಆಸ್ತಿಪಾಸ್ತಿ ನಷ್ಟದ ಅಂದಾಜು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.