Malenadu Mitra
ತೀರ್ಥಹಳ್ಳಿರಾಜ್ಯ

ಅಪಘಾತ : ಕಟ್ಟೆಹಕ್ಲು ಹೆಡ್ ಮಾಸ್ಟರ್ ವೆಂಕಟೇಶ್ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆ ಹಕ್ಲು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಲಿನ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಸಾವಿಗೀಡಾಗಿದ್ದಾರೆ.

ವೆಂಕಟೇಶ್ ಬೈಕ್​ನಲ್ಲಿ ಬರುತ್ತಿದ್ದಾಗ, ಟರ್ನಿಂಗ್​ನಲ್ಲಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್​ರವರು ಸಾವನ್ನಪ್ಪಿದ್ದಾರೆ.

ಶಾಲೆಯ ಕೆಲಸದ ಸಲುವಾಗಿಯೇ ವೆಂಕಟೇಶ್ ಎಲ್ಲಿಗೊ ಹೊರಟ್ಟಿದ್ದರು ಎನ್ನಲಾಗುತ್ತಿದ್ದು, ಟರ್ನಿಂಗ್​ ಸ್ಪೀಡ್ ಆಗಿದ್ದ ಒಮಿನಿಗೆ ಬೈಕ್​ ಡಿಕ್ಕಿಯಾಗಿದೆ.

ಮೂಲತಃ ಕೊಪ್ಪ ತಾಲ್ಲೂಕಿನ ಬೊಮ್ಲಾಪುರದವರಾದ ವೆಂಕಟೇಶ್​ ಈ ವರ್ಷ ಪ್ರಮೋಶನ್​ ಪಡೆದು ಹೆಡ್​ಮಾಸ್ಟರ್ ಆಗಿ ಕಟ್ಲೆ ಹಕ್ಲು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು.

ಸುತ್ತಮುತ್ತ ಉತ್ತಮ ಮೇಷ್ಟ್ರು ಎಂದು ಹೆಸರು ಮಾಡಿದ್ದ ಅವರ ನಿಧನಕ್ಕೆ ಸ್ತಳೀಯರು ಕಂಬನಿ ಮಿಡಿದಿದ್ದಾರೆ.

Ad Widget

Related posts

ವಾಣಿ ವಿಲಾಸ ಸಾಗರಕ್ಕೆ ಭದ್ರಾ ನೀರನ್ನು ತಕ್ಷಣವೇ ನಿಲ್ಲಿಸಬೇಕು

Malenadu Mirror Desk

ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ : ಮನವಿ

Malenadu Mirror Desk

ಸೊರಬ ಜನಕ್ಕೆ ಎಲ್ಲ ಶ್ರೇಯ ಸಲ್ಲಬೇಕು, ಕ್ಷೇತ್ರ , ಇಲಾಖೆಯ ಗೌರವ ಕಾಪಾಡುವೆ,
ಸೊರಬದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.