Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ಚಾಕು ಇರಿತದ ಆರೋಪಿಗೆ ಗುಂಡೇಟು ನಾಲ್ರರ ಬಂಧನ

ಶಿವಮೊಗ್ಗಲ್ಲಿ ಫ್ಲೆಕ್ಸ್ ವಿಚಾರಕ್ಕೆ ಆದ ಗಲಾಟೆ ಬಳಿಕ ಅಮಾಯಕ ಯುವಕನ ಮೇಲೆ ಚಾಕು ಇರಿದಿದ್ದರೆನ್ನಲಾದ ಆರೋಪಿಯ ಮೇಲೆ ಗುಂಡು ಹಾರಿಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಬಿ ಆಲಿಯಾಸ್ ಚರ್ಬಿಯನ್ನು ಎನ್.ಟಿ ರಸ್ತೆ ಬಳಿ ಬಂಧಿಸಲು ಹೋದಾಗ ಪೊಲೀಸರ ಮೇಲೆ ಆತ ಹಲ್ಲೆ ಮಾಡಲು ಮುಂದಾದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಬಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ಪ್ರೇಮ್‌ಸಿಂಗ್ ಮೇಲೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಸಿ.ನಗರದ ನದೀಮ್(೨೫) ಬುದ್ದನಗರದ ಅಬ್ದುಲ್ ರೆಹಮಾನ್(೨೫) ಸೇರಿದಂತೆ
ಆರೋಪಿಗಳು ಸೋಮವಾರ ಉಪ್ಪಾರ ಕೇರಿ ಬಳಿ ಪ್ರೇಮ್ ಸಿಂಗ್ ಮೇಲೆ ಚಾಕುವಿನಿಂದ ಇರಿದ ಕಾರಣ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸ್ವಾತಂತ್ರ್ಯದ ಅಮೃತಮಹೋತ್ಸವ ಸಮಾರಂಭದ ಸಂದರ್ಭ ಶಿವಪ್ಪನಾಯಕ ವೃತ್ತದಲ್ಲಿ ಅಳವಡಿಸಿದ್ದ ವೀರಸಾವರ್ಕರ್ ಪ್ಲೆಕ್ಸ್ ತೆರವುಗೊಳಿಸಿದ್ದರಿಂದ ಎರಡು ಕೋಮಿನ ನಡುವೆ ವಾಗ್ವಾದ ಆಗಿತ್ತು. ಈ ಸಂದರ್ಭ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

Ad Widget

Related posts

ಸಾಹಿತ್ಯ ಸೌಹಾರ್ದ ಸಮಾಜ ಕಟ್ಟಬೇಕು: ಪ್ರೊ.ಎಸ್.ಜಿ.ಸಿದ್ದರಾಮಯ್ಯ
೧೭ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ, ಗೋಷ್ಠಿಗಳನ್ನು ಮೌಲಿಕ ವಿಷಯಗಳ ಚರ್ಚೆ

Malenadu Mirror Desk

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

Malenadu Mirror Desk

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.