Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಆ. 20 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಣೆ

ಶಿವಮೊಗ್ಗ ನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು, ಆ. 20ರ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5.30 ರವರೆಗೆ ತುರ್ತು ಸೇವೆ ಹೊರತುಪಡಿಸಿ, ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಬೈಕ್ ಗಳಲ್ಲಿ 40 ವರ್ಷ ವಯೋಮಾನದೊಳಗಿನ ಪುರುಷರನ್ನು ಹಿಂಬದಿ ಸವಾರರಾಗಿ ಕೂರಿಸಿಕೊಂಡು ಹೋಗುವಂತಿಲ್ಲ. ರಾತ್ರಿ 9 ಗಂಟೆಯೊಳಗೆ ಎಲ್ಲ ರೀತಿಯ ವ್ಯಾಪಾರದ ಅಂಗಡಿಗಳನ್ನು ಬಂದ್ ಮಾಡಬೇಕು. ರಾತ್ರಿ 9 ಗಂಟೆ ನಂತರ ಸಿನಿಮಾ ಮಂದಿರಗಳಲ್ಲಿ ಚಿತ್ರ ದರ್ಶನಕ್ಕೆ ಅವಕಾಶವಿಲ್ಲವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Related posts

ಕುವೆಂಪು ಅವರಿಗೆ ಅವಮಾನ ಖಂಡಿಸಿ ಪ್ರತಿಭಟನೆ ಚಕ್ರತೀರ್ಥ ವಜಾ ಮಾಡಿ,ಶಿಕ್ಷಣ ಸಚಿವರೆ ರಾಜೀನಾಮೆ ನೀಡಿ ಎಂದ ಪ್ರತಿಭಟನಾಕಾರರು

Malenadu Mirror Desk

ಸಿಗಂದೂರಲ್ಲಿ ನವರಾತ್ರಿ ಉತ್ಸವ ಆರಂಭ ಶಿವಗಿರಿಯ ಸತ್ಯಾನಂದ ತೀರ್ಥರಿಂದ ಉತ್ಸವಕ್ಕೆ ಚಾಲನೆ

Malenadu Mirror Desk

ಅತೀ ಹಿಂದುಳಿದ ವರ್ಗಕ್ಕೆ ಅಧಿಕಾರ ಸಿಗಬೇಕು: ಬಿ.ಕೆ.ಹರಿಪ್ರಸಾದ್, ಬೆಂಗಳೂರಿನಲ್ಲಿ ಸೆ.೯ ರಂದು ಸಮಾವೇಶ,ಹಕ್ಕೊತ್ತಾಯ ಮಂಡನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.