Malenadu Mitra
ರಾಜ್ಯಶಿವಮೊಗ್ಗ

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

ತುಮರಿ,ಸೆ.23: ಕರೂರು ಹೋಬಳಿಯ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಮಹಿಳಾ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಉತ್ಸವ ನಡೆಯಲಿದ್ದು, ಈ ಸಂದರ್ಭ ಮಹಿಳಾ ಸಂಘದ ಸದಸ್ಯೆಯರು ಸ್ಥಳೀಯರೊಡಗೂಡಿ ದೇವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಈ ಸಂದರ್ಭ ಭಕ್ತರು ಮತ್ತು ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಲಾಯಿತು,. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ವೀರೇಶ್ ಮೊದಲಾದ ಸಿಬ್ಬಂದಿಗಳು, ಮಹಿಳಾ ಸಂಘದ ಅಧ್ಯಕ್ಷೆ ಸಂಧ್ಯಾ ಸಿಗಂದೂರು, ಕಾರ್ಯದರ್ಶಿ ಪದ್ಮಾವತಿ, ಸದಸ್ಯರಾದ ಲಕ್ಷ್ಮಿದೇವರಾಜ್, ಸುಮಿತ್ರಾ, ನಾಗರತ್ನಮ್ಮ , ವಿಮಲಾ ,ಹಾಗು ನೇತ್ರಾವತಿ, ಸುಮಿತ್ರಾ, ಹಾಲಮ್ಮ ಮತ್ತಿತರರು ಹಾಜರಿದ್ದರು.

Ad Widget

Related posts

ಮಹಿಳಾ ಸಬಲೀಕರಣ, ರಕ್ಷಣೆಗೆ ಸರಕಾರ ಒತ್ತು ನೀಡಬೇಕು

Malenadu Mirror Desk

ಎಸ್. ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ

Malenadu Mirror Desk

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.