ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತದ ದಿಂಬದ ರಮೇಶ್ (40) ನಿಧನರಾಗಿದ್ದಾರೆ
ಪಾದಯಾತ್ರೆಯಲ್ಲಿ ರಮೇಶ್ ಭಾಗವಹಿಸಿದ್ದು, ಹಿರಿಯೂರು ಸಮೀಪ ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದಿದೆ. ಮೂಡಿಗೆರೆಯಿಂದ ಕಾರ್ಯಕರ್ತರನ್ನು ಕರೆತಂದಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ದೇಹ ಹಿರಿಯೂರಿನಲ್ಲಿದ್ದು , ಮಂಗಳವಾರ ಸಾಗರಕ್ಕೆ ಬರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ


