Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್, ಬಂಧನ

ಶಿವಮೊಗ್ಗ ನಗರದ ಗ್ರಾಮಾಂತರ ಪೊಲಿಸರು ರೌಡಿಶೀಟರ್ ಪ್ರವೀಣ್ ಆಲಿಯಾಸ್ ಮೋಟು ಪ್ರವೀಣ್‌ಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಇತ್ತೀಚೆಗೆ ನಗರದಲಿ ಕಾರಿಗೆ ಬೆಂಕಿಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ಸಂದರ್ಭ ರೌಡಿಶೀಟರ್ ಪ್ರವೀಣ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಶಿವರಾಜ್ ಎಂಬ ಸಿಬ್ಬಂದಿಗೆ ಗಾಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇನ್ಸ್‌ಪೆಕ್ಟರ್ ರಮೇಶ್ ಅವರ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಪ್ರವೀಣ್ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಇಬ್ಬರೂ ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಆರೋಪಿ ಮೇಲೆ ದೊಡ್ಡ ಪೇಟೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಸೇರಿದಂತೆ ಒಟ್ಟು ಹದಿನೈದು ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Ad Widget

Related posts

ಬಸ್ಸು -ಕಾರು ಡಿಕ್ಕಿ ಇಬ್ಬರು ಗಂಭೀರ

Malenadu Mirror Desk

ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಭೀಕರ ಹತ್ಯೆ.

Malenadu Mirror Desk

ರೌಡಿ ಹಂದಿ ಅಣ್ಣಿ ಕೊಲೆ ,ಶಿವಮೊಗ್ಗ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಹಾಡ ಹಗಲೇ ಬೆಚ್ಚಿ ಬೀಳಿಸಿದ ದುಷ್ಕರ್ಮಿಗಳ ಕೃತ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.