Malenadu Mitra
ರಾಜ್ಯಶಿವಮೊಗ್ಗಹೊಸನಗರ

ನಗರದಲ್ಲಿ ಪ್ರಣವಾನಂದ ಶ್ರೀಗಳ ಪಾದಯಾತ್ರೆ ಬರಮಾಡಿಕೊಂಡ ಸ್ಥಳೀಯ ಮುಖಂಡರು

ನಗರ,ಜ.೧೫: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶ್ರೀ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಮಂಗಳೂರಿನಿಂದ ಬೆಂಗಳೂರಿನ ವರೆಗೆ ನಡೆಯುತ್ತಿರುವ ಪಾದಯಾತ್ರೆಯು ಭಾನುವಾರ ಹೊಸನಗರ ತಾಲೂಕು ಮಾಸ್ತಿಕಟ್ಟೆಯಿಂದ ನಗರಕ್ಕೆ ಪ್ರವೇಶ ಮಾಡಿತು.
ಒಂಬತ್ತನೇ ದಿನದ ಈ ಪಾದಯಾತ್ರೆಯು ಮಾಸ್ತಿಕಟ್ಟೆ ಯಿಂದ ಪ್ರಾರಂಭಿಸಿ ನಿಲ್ಸ್‌ಗಲ್ ಗ್ರಾಮದಲ್ಲಿ ಮಧ್ಯಾಹ್ನದ ಜಾಗೃತಿ ಸಭೆ ಯೊಂದಿಗೆ ಪ್ರಸಾದ ಸ್ವೀಕರಿಸಿ ಸಂಜೆ ಬಿದನೂರು ನಗರಕ್ಕೆ ಪ್ರವೇಶಿಸಿತು. ಅಲ್ಲಿನ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಜಾಗೃತಿ ಸಭೆ ನಡೆಸಲಾಯಿತು.
ನಗರಕ್ಕೆ ಪ್ರವೇಶ ಮಾಡುತಿದ್ದಂತೆ ಪ್ರಣವಾನಂದ ಶ್ರೀಗಳನ್ನು ಸ್ವಾಗತಿಸಿ ಗೌರವಿಸಲಾಯಿತು. ಲಯನ್ ಹೆಚ್. ವಾಸಪ್ಪ ಮಾಸ್ತಿಕಟ್ಟೆ, ಮುರಳೀಧರ ಜಿ ಈ, ದೇವಣ್ಣಗುಡ್ಡೆಕೊಪ್ಪ, ಗೋಪಾಲ್ , ದೇವಮ್ಮ, ಏರಗಿ ಉಮೇಶ್, ಮುಡುಬರಾಘವೇಂದ್ರ, ಶಿವು ಹೊದ್ಲ , ಸತೀಶ್ ಬೇಗುವಳ್ಳಿ, ಶ್ರೀಧರ್ ಗುಡ್ಡೆ ಕೊಪ್ಪ, ಲೋಕೇಶ್ ಮಸಗಲ್ಲಿ, ನಗರ ನಿತಿನ್ ,ನಾಗರಾಜ್ , ಶುಭಾಶ್ ನಗರ, ಕಿರಣ್, ರುದ್ರ ನಾಯ್ಕ್ ಹಿಲ್ಕುಂಜಿ ಮತ್ತಿತರರ ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು.

Ad Widget

Related posts

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ವಸೂಲು ಮಾಡಿ: ಕೆ.ಎಸ್.ಈಶ್ವರಪ್ಪ

Malenadu Mirror Desk

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ, ಮೈಸೂರು ನಜರಾಬಾದ್ ಠಾಣೆಯಲ್ಲಿ ದೂರು

Malenadu Mirror Desk

ಪಠ್ಯಪುಸ್ತಕ ತಿರುಚಿರುವುದರ ಹಿಂದೆ ಆರ್‌ಎಸ್‌ಎಸ್ ಕೈವಾಡ: ಚಂದ್ರಪ್ಪ ಮಾಸ್ತರ್ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.