Malenadu Mitra
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾಗಿ ಮಂಜುನಾಥ್

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಜಿ.ಡಿ ಮಂಜುನಾಥ್ ಅವರನ್ನು ನೇಮಕ ಮಾಡಿದ್ದಾರೆ.
ಜೆಡಿಎಸ್‌ನಲ್ಲಿದ್ದ ಮಂಜುನಾಥ್ ಅವರು ಮಧುಬಂಗಾರಪ್ಪ ಅವರೊಂದಿಗೆ ಕಾಂಗ್ರೆಸ್ ಸೇರಿದ್ದು, ಶಿವಮೊಗ್ಗ ಜಿಲ್ಲಾ ಮುಖಂಡರಾಗಿ ಕೆಲಸ ಮಾಡಿದ್ದಾರೆ. ಉತ್ತಮ ಸಂಘಟಕರಾದ ಮಂಜುನಾಥ್ ಅವರ ಸೇವೆಯನ್ನು ಪರಿಗಣಿಸಿ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಮಾಡಲಾಗಿದೆ. ಅದೇ ರೀತಿ ಕಾಶಿ ವಿಶ್ವನಾಥ್ ಮತ್ತು ರಘು ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ನೇಮಕಕ್ಕೆ ಸಹಕರಿಸಿದ ರಾಜ್ಯ ಹಾಗೂ ಜಿಲ್ಲೆಯ ಎಲ್ಲ ಮುಖಂಡರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿ.ಡಿ ಮಂಜುನಾಥ್ ಧನ್ಯವಾದಗಳು ಸಲ್ಲಿಸಿದ್ದಾರೆ.

Ad Widget

Related posts

ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ

Malenadu Mirror Desk

ಶಿವಮೊಗ್ಗದಲ್ಲಿ ಕೋವಿಡ್ ವಾರ್ಡ್ ಆಕ್ಸಿಜನ್ ಪೈಪ್ ಲೀಕೇಜ್ , ತಪ್ಪಿದ ಅವಘಡ

Malenadu Mirror Desk

ಮೆಡಿಕಲ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.