Malenadu Mitra
ರಾಜ್ಯ

ಜೆಡಿಎಸ್ ಹಿಂದುಳಿದ ವರ್ಗ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

ಜಾತ್ಯತೀತ ಜನತಾದಳದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ವಕೀಲ ಕೆ.ಎಲ್.ಉಮೇಶ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾದ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಈ ನೇಮಕ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.
ಉಮೇಶ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನವರು. ಜೆಡಿಎಸ್ ಜಿಲ್ಲಾ ಘಟಕದಲ್ಲಿ ವಿವಿಧ ಹುದ್ದೆಗಳಲ್ಲಿಸೇವೆ ಸಲ್ಲಿಸಿರುವ ಅವರು, ಪಕ್ಷಕ್ಕೆ ನಡೆದ ಆಂತರಿಕ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಜನಪರ ಹಾಗೂ ರೈತ ಪರ ಚಿಂತನೆಯುಳ್ಳ ಉಮೇಶ್ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ಮಾಡಿರುವುದು ಸಂತೋಷ ತಂದಿದೆ ಎಂದು ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ತಿಳಿಸಿದ್ದಾರೆ. ಉಮೇಶ್ ಅವರಿಗೆ ಶ್ರೀಕಾಂತ್ ಅಭಿನಂದನೆ ಸಲ್ಲಿಸಿದ್ದಾರೆ.

Ad Widget

Related posts

ಅಪ್ಪ,ಇಬ್ಬರು ಮಕ್ಕಳ ಸಾವು, ಸಾವು ಬದುಕಿನ ಹೋರಾಟದಲ್ಲಿ ತಾಯಿ, ತಬ್ಬಲಿಯಾದ ಹೆಣ್ಣು ಮಗಳು, ದೇವಾ ಈ ಸಾವು ನ್ಯಾಯವೆ ?

Malenadu Mirror Desk

ಮುಗಿದ ಪ್ರತಿಷ್ಠೆ ,ಇನ್ನು ಬಲಾಬಲ

Malenadu Mirror Desk

ಶಿವಮೊಗ್ಗದಲ್ಲಿ 97 ಸೋಂಕು,3 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.