Malenadu Mitra
ರಾಜ್ಯಶಿವಮೊಗ್ಗ

ತಡರಾತ್ರಿ ಅಥವಾ ನಾಳೆ ಶಿವಮೊಗ್ಗ ಕ್ಷೇತ್ರ ಅಭ್ಯರ್ಥಿ ಘೋಷಣೆ : ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ,ಏ.೧೮: ಮಾನ್ವಿ ಹಾಗೂ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯ್ಕೆ ತಡರಾತ್ರಿ ಆಗಬಹುದು, ವರಿಷ್ಠರು ಗೆಲ್ಲುವ ಲೆಕ್ಕಾಚಾರ ನೋಡಿ ಟಿಕೆಟ್ ಹಂಚಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬುಧವಾರ ಪುತ್ರ ವಿಜಯೇಂದ್ರ ಅವರು ನಾಮಪತ್ರ ಸಲ್ಲಿಸಲಿದ್ದು, ಶಿಕಾರಿಪುರಕ್ಕೆ ತೆರಳುವ ಮುನ್ನ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸವದಿ ಮತ್ತು ಜಗದೀಶ್ ಶೆಟ್ಟರ್ ಅವರು ಪಕ್ಷ ಬಿಟ್ಟಿರುವ ಕಾರಣ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಪತ್ನಿಗೆ ಟಿಕೆಟ್ ಕೊಟ್ಟು ನಿಮ್ಮನ್ನು ರಾಜ್ಯಸಭೆಗೆ ಕಳಿಸಿ ಮಂತ್ರಿ ಮಾಡ್ತೇವೆ ಎಂದು ರಾಷ್ಟ್ರೀಯ ನಾಯಕರು ಹೇಳಿದರೂ, ನಿರ್ಲಕ್ಷ್ಯ ಮಾಡಿದ್ದಾರೆ. ಬಿಜೆಪಿಯಿಂದ ಎಲ್ಲವನ್ನೂ ಪಡೆದು ಅವರು ಈ ಆರೋಪ ಮಾಡುವುದು ಸರಿಯಲ್ಲ ಎಂದರು ಹೇಳಿದರು.
ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಯಾಕೆ ವಿಳಂಬವಾಗುತ್ತಿದೆ ಎಂದು ಗೊತ್ತಿಲ್ಲ. ಯಾರು ಏನೇ ಆರೋಪ ಮತ್ತು ಸುಳ್ಳು ಹೇಳಿದರೂ,ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸಲಿದ್ದು, ಕ್ಷೇತ್ರದಲ್ಲಿ ನಡೆಯುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಬಂದ್ದೇನೆ. ನಾಳೆ ಶಿಕಾರಿಪುರದಲ್ಲಿ ಅಪಾರ ಪ್ರಮಾಣದ ಬೆಂಬಲಿಗರು ಸೇರಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

Ad Widget

Related posts

ಮುಂದಿನ ಚುನಾವಣೆಲಿ ಅಪ್ಪನ ಕನಸು ನನಸು ಮಾಡ್ತೇವೆ: ವಿಜಯೇಂದ್ರ

Malenadu Mirror Desk

ಒಂದು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕಸಿಗಂದೂರು ನವರಾತ್ರಿ ಉತ್ಸವದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk

ಒಂದು ಸಾಹಿತ್ಯ ಕೃತಿ ಯಾವುದು, ಅದು ಹೇಗಿರಬೇಕು ಎಂಬ ಬಗ್ಗೆಯೇ ಜಿಜ್ಞಾಸೆಗಳಿವೆ :ವಿಮರ್ಶಕ ಡಾ. ರಾಜೇಂದ್ರ ಚೆನ್ನಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.