Malenadu Mitra
ರಾಜ್ಯಶಿವಮೊಗ್ಗ

ಜೆಡಿಎಸ್ ಸೇರಿದ ಮಾಜಿ ಶಾಸಕ ಪ್ರಸನ್ನಕುಮಾರ್

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಅವರು ಶುಕ್ರವಾರ ಜಾತ್ಯಾತೀತ ಜನತಾದಳ ಸೇರಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಅವರು ಅದು ಸಿಗದೇ ಇದ್ದಾಗ ಮುನಿಸಿಕೊಂಡಿದ್ದರು. ಪಕ್ಷ ಸೇರುವ ಸಂದರ್ಭ ಜೆಡಿಎಸ್ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಇದ್ದರು. ಪ್ರಸನ್ನಕುಮಾರ್ ಅವರ ಜತೆಯಲ್ಲಿ ಮಹಾನಗರಪಾಲಿಕೆ ಸದಸ್ಯ ಬೊಮ್ಮನಕಟ್ಟೆ ಮಂಜುನಾಥ್, ಪ್ರಮುಖರಾದ ರಘು ಮತ್ತಿತರರು ಇದ್ದರು.

Ad Widget

Related posts

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk

ಕೆ.ಇ.ಕಾಂತೇಶ್ ಬಿರುಸಿನ ಪ್ರಚಾರ

Malenadu Mirror Desk

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.