Malenadu Mitra
ರಾಜ್ಯಶಿವಮೊಗ್ಗ

ಜೆಡಿಎಸ್ ಸೇರಿದ ಮಾಜಿ ಶಾಸಕ ಪ್ರಸನ್ನಕುಮಾರ್

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಅವರು ಶುಕ್ರವಾರ ಜಾತ್ಯಾತೀತ ಜನತಾದಳ ಸೇರಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಅವರು ಅದು ಸಿಗದೇ ಇದ್ದಾಗ ಮುನಿಸಿಕೊಂಡಿದ್ದರು. ಪಕ್ಷ ಸೇರುವ ಸಂದರ್ಭ ಜೆಡಿಎಸ್ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಇದ್ದರು. ಪ್ರಸನ್ನಕುಮಾರ್ ಅವರ ಜತೆಯಲ್ಲಿ ಮಹಾನಗರಪಾಲಿಕೆ ಸದಸ್ಯ ಬೊಮ್ಮನಕಟ್ಟೆ ಮಂಜುನಾಥ್, ಪ್ರಮುಖರಾದ ರಘು ಮತ್ತಿತರರು ಇದ್ದರು.

Ad Widget

Related posts

ಶಿವಮೊಗ್ಗದಲ್ಲಿ 755 ಕೊರೊನ ಪ್ರಕರಣ

Malenadu Mirror Desk

ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್

Malenadu Mirror Desk

ಹಿಜಾಬ್-ಕೇಸರಿ ಶಾಲು ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ಎಸ್‌ಪಿ ಭೇಟಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.