Malenadu Mitra
ರಾಜ್ಯಶಿವಮೊಗ್ಗ

ಜೋಗಕ್ಕೆ ಮರಳಿದ ವೈಭವ, ಕಣ್ತುಂಬಿಕೊಂಡ ಜನಸಾಗರ

ಶಿವಮೊಗ್ಗ:, ಜು. ೯: ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಶನಿವಾರ ಮತ್ತು ಭಾನುವಾರ ರಜಾದಿನವಿದ್ದುದರಿಂದ ಅಪಾರ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಬಂದು ಕಣ್ಮನ ತುಂಬಿಕೊಂಡರು.

ಆಗಾಗ್ಗೆ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಂಡಿತು.

 ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಜೋಗಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ಆದರೆ ಪ್ರಸ್ತುತ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದ ಕಾರಣದಿಂದ ಜಲಪಾತದಲ್ಲಿ ಜಲಧಾರೆಯ ವೈಭೋಗ ಕಣ್ಮರೆಯಾಗಿತ್ತು. ಪ್ರವಾಸಿಗರ ಸಂಖ್ಯೆ ಕೂಡ ವಿರಳವಾಗಿತ್ತು.

ಜುಲೈ ತಿಂಗಳ ಮೊದಲ ವಾರದಿಂದ ಶರಾವತಿ ಕಣಿವೆ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಇದರಿಂದ ಮತ್ತೆ ಜಲಪಾತ ಭೋರ್ಗರೆಯಲಾರಂಭಿಸಿದೆ. ಇದನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಪ್ರವಾಸಿಗರು ದೌಡಾಯಿಸಲಾರಂಭಿಸಿದ್ದಾರೆ.

ಕಿರಿಕಿರಿ: ಜಲಪಾತದ ಬಳಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಜೋಗ ಅಭಿವೃದ್ದಿ ಪ್ರಾಧಿಕಾರದಿಂದ ಹಲವು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ. ಇದು ವಾಹನಗಳ ನಿಲುಗಡೆ ಸೇರಿದಂತೆ ಹಲವು ರೀತಿಯ ಕಿರಿಕಿರಿಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗೆಯ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಡೆತಡೆಯಾಗಿ ಪರಿಣಮಿಸಿದೆ ಎನ್ನುವುದು ಪ್ರವಾಸಿಗರ ಅರೋಪವಾಗಿದೆ

Ad Widget

Related posts

ಸದನದಲ್ಲಿ ನಿಮ್ಹಾನ್ಸ್ ಅವ್ಯವಸ್ಥೆ ಬಿಚ್ಚಿಟ್ಟ ಶಾಸಕ; ನಾನು ನನ್ನ ಇಬ್ಬರು ಸಂಬಂಧಿಗಳನ್ನು ಕಳೆದುಕೊಂಡಿದ್ದೇನೆ:ಹಾಲಪ್ಪ

Malenadu Mirror Desk

ಅರಣ್ಯ ಹಕ್ಕು ಕಾಯಿದೆಯಡಿ ನ್ಯಾಯ ಕೊಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಮೊರೆ, ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಎಚ್ಚರಿಕೆ

Malenadu Mirror Desk

ಸಿಗಂದೂರು ಲಾಂಚ್‍ನಿಂದ ಹೊಳೆಗೆ ಹಾರಿದ ಮಹಿಳೆ, ಆತ್ಮಹತ್ಯೆ ತಪ್ಪಿಸಿದ ಸ್ಥಳೀಯ ಸಾಹಸಿ ಯುವಕರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.