Malenadu Mitra
ರಾಜ್ಯಶಿವಮೊಗ್ಗ

ಸೇತುವೆ ಮೇಲಿಂದ ತುಂಬಿದ ತುಂಗೆಗೆ ಹಾರಿದ, ಈಜಿ ಮೇಲೆದ್ದು ಬಂದ
ಯುವಕನ ಹುಚ್ಚಾಟಕ್ಕೆ ಜನರ ಆಕ್ರೋಶ

ಶಿವಮೊಗ್ಗ ನಗರದಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿದೆ. ಇದರ ನಡುವೆ ತುಂಗಾ ನದಿಯನ್ನು ನೋಡಲು ಜನರ ದಂಡು ಹೊಸ ಸೇತುವೆ ಹಾಗೂ ಹಳೆ ಸೇತುವೆಗಳ ಬಳಿಗೆ ಬರುತ್ತಿದೆ. ಮಂಗಳವಾರ ತುಂಗಾ ನದಿಯ ಹಳೆಯ ಸೇತುವೆಯಿಂದ ಯುವಕನೊಬ್ಬ ಹೊಳೆಗೆ ಹಾರಿದ್ದಾನೆ. ಈ ಘಟನೆ ಕೆಲಕಾಲ ಆತಂಕ ಮೂಡಿಸಿತ್ತಾದರೂ ಬಳಿಕ ಯುವಕನ ಹುಚ್ಚಾಟಕ್ಕೆ ಆಕ್ರೋಶ ವ್ಯಕ್ತವಾಗಿದೆ

ತುಂಬಿದ ತುಂಗೆಯಲ್ಲಿ ಈಜುವುದು ಅಪಾಯಕಾರಿ ಕೆಲಸವೇ ಸರಿ. ಹೊಳೆಬಸ್ ನಿಲ್ದಾಣ ಸಮೀಪದಲ್ಲಿ ಯುವಕನೊಬ್ಬ ಸೇತುವೆಯ ಮೇಲಿನಿಂದ ತುಂಬಿದ ಹೊಳೆಗೆ ಹಾರಿದ್ದಾನೆ. ಯಾರೋ ಈತ, ಸಾಯೋಕೆ ಹಾರಿದ್ದಾನಾ ಅಂತಾ ಜನರು ಸೇತುವೆಯಿಂದ ಇಣುಕಿ ನೋಡುತ್ತಿರುವಾಗಲೇ, ನದಿಗೆ ಹಾರಿದ್ದ ಯುವಕ ಅತ್ತ ಲೀಲಾಜಾಲವಾಗಿ ಈಜಿಕೊಂಡು ಸುಮಾರು ದೂರದಲ್ಲಿ ನದಿಯ ದಡದಿಂದ ಮೇಲಕ್ಕೆ ಬಂದಿದ್ದಾನೆ.

ಈ ದೃಶ್ಯವನ್ನು ನೋಡಿದವರು ಅಚ್ಚರಿಯ ವ್ಯಕ್ತಪಡಿಸುವುದರ ಜೊತೆಗೆ, ಇದೇನು ಹುಚ್ಚಾಟ ಎಂದು ಮಾತನಾಡಿಕೊಂಡರಷ್ಟೆ ಅಲ್ಲದೆ ಹತ್ತಿರ ಕೋಟೆ ಪೊಲೀಸ್ ಸ್ಟೇಷನ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇನ್ನೂ ಪೊಲೀಸರ ವಿಚಾರಣೆ ವೇಳೆ ನದಿಗೆ ಹಾರಿದ ಯುವಕ ಹೆಸರು ಗಂಗಪ್ಪ ಅಲಿಯಾಸ್ ಅಂಗೂರಿ ಎಂದು ಗೊತ್ತಾಗಿದೆ. ಈ ಯುವಕ ಈಜು ಬಲ್ಲವನಾಗಿದ್ದು, ವಿಡಿಯೋ ಮಾಡುವ ಸಲುವಾಗಿ ನದಿಗೆ ಹಾರಿರುವ ಬಗ್ಗೆ ಮಾಹಿತಿಯಿದೆ.
ಸದ್ಯ ಯುವಕ ನದಿಗೆ ಹಾರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಯುವಕನ ನಡೆ ಬಗ್ಗೆ ಪ್ರಶ್ನೆ ಮಾಡಲಾಗುತ್ತಿದೆ.

Ad Widget

Related posts

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

Malenadu Mirror Desk

ಈಶ್ವರಪ್ಪರಿಗೆ ಮಾತ್ರ ಯಾಕೆ ಈ ಅನ್ಯಾಯ ?
ಕಮೀಷನ್ ಆರೋಪ ಇಡೀ ಸರಕಾರದ ಮೇಲೆ ಬಂದಿತ್ತಲ್ಲವೆ ?

Malenadu Mirror Desk

ಕಂದಾಯ ಗ್ರಾಮ ಘೋಷಣೆಗೆ ಕಾಗೋಡು ತಿಮ್ಮಪ್ಪ ಒತ್ತಾಯ, ಸರಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.