Malenadu Mitra
ರಾಜ್ಯಸಾಗರ

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಧರ್ಮದರ್ಶಿ ಡಾ.ರಾಮಪ್ಪ

ಸಾಗರ: ನಾವು ನಮ್ಮದೆಂದು ಮಾಡುವ ಕಾರ್ಯದಲ್ಲಿ ಸತ್ಪಲ ಹೆಚ್ಚು, ಸಂಸ್ಕೃತಿ ಜಾಗೃತಿ ಮಾಡುವಲ್ಲಿ ಹಬ್ಬ ಹರಿದಿನಗಳು ಸಹಕಾರಿ ಎಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಸ್ ರಾಮಪ್ಪ ಹೇಳಿದರು.
ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನೆರೆದಿದ್ದ ಭಕ್ತರಿಗೆ ಲಕ್ಷ್ಮಿ ದೇವಿಯ ಮಹತ್ವ ಸಾರಿದರು. ವರ ಮಹಾಲಕ್ಷ್ಮಿ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ದೇವಿ ಮಂಟಪದಲ್ಲಿ ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ, ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದೇವಿಗೆ ಪ್ರಿಯವಾದ ಲಾಡು ಹಲವು ಬಗೆಯ ಸಿಹಿ ತಿನಿಸುಗಳನ್ನು ನೈವೇದ್ಯ ಮಾಡಿ ಒಳಿತಿಗಾಗಿ ಧರ್ಮಾಧಿಕಾರಿ ಎಸ್ ರಾಮಪ್ಪ ಪ್ರಾರ್ಥಿಸಿದರು. ಚೌಡೇಶ್ವರಿ ದೇವಿಗೆ ಚಂಡಿಕಾ ಹವನ, ದೇವಿ ಪಾರಾಯಣ
ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿದವು. ಬೆಳಿಗ್ಗೆಯಿಂದಲೇ ಸಾವಿರಾರು ಮಂದಿ ಭಕ್ತರು ತಂಡೋಪ ತಂಡವಾಗಿ ದೇವಿ ದರ್ಶನ ಪಡೆದರು.
ಕಾರ್ಯದರ್ಶಿ ರವಿಕುಮಾರ್ ಹೆಚ್, ನಾಗರಾಜ ಕೈಸೋಡಿ, ಸಂಧ್ಯಾ ಸಿಗಂದೂರು, ವ್ಯವಸ್ಥಾಪಕ ಪ್ರಕಾಶ ಸಿಬ್ಬಂದಿಗಳು ಇದ್ದರು.

Ad Widget

Related posts

ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಕೇಂದ್ರಗಳಲ್ಲಿಯೇ ಅರ್ಜಿ ಸಲ್ಲಿಸಿ: ಹೆಚ್.ಸಿ.ಯೋಗೇಶ್

Malenadu Mirror Desk

ಕಾಂಗ್ರೆಸ್ ಒಳಬೇಗುದಿ ಬಯಲು, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಹೆಚ್.ಸಿ ಯೋಗೇಶ್ ಗೆ ನೋಟಿಸ್, ಆಯನೂರು ಮಂಜುನಾಥ್‌ಗೆ ಅವಮಾನ ಮಾಡಿದರೇ ಯುವನಾಯಕ ?

Malenadu Mirror Desk

ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.