Malenadu Mitra
ರಾಜ್ಯಸಾಗರ

ಸಿಗಂದೂರಲ್ಲಿ ನಾರಾಯಣಗುರು ಜಯಂತಿ ಆಚರಣೆ

ಸಾಗರ: ಸಿಗಂದೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ನೆರವೇರಿಸಲಾಯಿತು. ನಾರಾಯಣ ಗುರುಗಳ ಭಾವಚಿತ್ರಕ್ಕೆ ದೇವಳ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂತ ಬಲಯುತರಾಗಿ ಎಂಬ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾರಾಯಣ ಗುರುಗಳ ಜಯಂತಿ ಅಂಗವಾಗಿ ದೇವಿಗೆ ಚಂಡಿಕಾ ಹವನ. ಮಹಾ ಮಂಗಳಾರತಿ ವಿಶೇಷ ಪೂಜೆಗಳು ನೇರವೇರಿತು. ಆಲಯದ ಒಳಭಾಗದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಅಲಂಕಾರದೊಂದಿಗೆ ಗುರು ಪೂಜೆ ನೇರವೇರಿತು. ನೆರೆದಿದ್ದ ಭಕ್ತರಿಗೆ ಗುರುಗಳ ಮಹತ್ವ ಸಾರಲಾಯಿತು. ಬೆಳಮಕ್ಕಿಯ ಈಡಿಗ ಆದಿಶಕ್ತಿ ಭಜನಾ ತಂಡದಿಂದ ನಾರಾಯಣ ಗುರುಗಳ ಕಿರ್ತನೆಗಳ ನಿರಂತರ ಭಜನೆ ನಡೆಯಿತು. ಈ ವೇಳೆ ದೇವಸ್ಥಾನದ ವ್ಯವಸ್ಥಪಕ ಪ್ರಕಾಶ, ಸಂಧ್ಯಾ ಸಿಗಂದೂರು. ಭಜನಾ ತಂಡದ ವಿನೋದ, ಸಿಬ್ಬಂದಿಗಳು, ಸ್ಥಳೀಯರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಹಕ್ಕುಪತ್ರ ದೊರೆಯುವ ತನಕ ನಿರಂತರ ಹೋರಾಟ: ಕಾಗೋಡು ಗುಡುಗು

Malenadu Mirror Desk

ಮುಕ್ತಮನಸ್ಸಿನಿಂದ ಜೀವನ ನೋಡಿದರೆ ಆಳದ ಅರಿವಾಗುತ್ತದೆ: ಇನ್ಫೋಸಿಸ್ ಸುಧಾಮೂರ್ತಿ

Malenadu Mirror Desk

ಪತ್ರಕರ್ತರಿಗೆ ಬದ್ಧತೆ, ಉದ್ಯಮಕ್ಕೆ ವಿಶ್ವಾಸಾರ್ಹತೆ ಮುಖ್ಯ
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದ ವಾರ್ತಾಇಲಾಖೆ ನಿರ್ದೇಶಕ ಮುರಳೀಧರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.