Malenadu Mitra
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬೆಂಕಿ ಅವಘಡ ಮೂವರು ಸಾವು,ಒಬ್ಬರು ಗಂಭೀರ, ತೀರ್ಥಹಳ್ಳಿ ತಾಲೂಕಲ್ಲಿ ಹೃದಯ ವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್​ನಲ್ಲಿ   ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ  ಗಣಪತಿ ಕಟ್ಟೆ ರೈಸ್​ ಮಿಲ್​  ಹತ್ತಿರ  ಇರುವ  ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. 

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟತೆ ನೀಡಬೇಕಿದೆ  

ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು

Ad Widget

Related posts

ಶಿವಮೊಗ್ಗ ಒನ್ ಸ್ವಚ್ಛತೆಗೆ ಕಾಂಗ್ರೆಸ್ ಆಗ್ರಹ

Malenadu Mirror Desk

ಕರೋಕೆ ಗಾಯನ ಸ್ಪರ್ಧೆ,ಶಿವಮೊಗ್ಗ ಪ್ರೆಸ್ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜನೆ, ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಸ್ಪರ್ಧಿಗಳ ನೋಂದಣಿ

Malenadu Mirror Desk

ವ್ಯಕ್ತಿತ್ವ ಇರುವವರಿಂದ ಮಾತ್ರ ಕಟ್ಟುವ ಕೆಲಸ ಸಾಧ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.