Malenadu Mitra
ರಾಜ್ಯಶಿವಮೊಗ್ಗ

ಸಿಗಂದೂರು ಎರಡನೇ ದಿನದ ನವರಾತ್ರಿ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಭಾಗಿ

ಸಾಗರ ತಾಲ್ಲೂಕಿನ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಎರಡನೇ ದಿನದ ನವರಾತ್ರಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾ ಸ್ವಾಮಿಗಳು ಭಾಗವಹಿಸಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಧರ್ಮ ಸಂದೇಶ ನೀಡಿದರು.
ನವರಾತ್ರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಿಗೆ ಪ್ರಾತಃ ಕಾಲ ೦೪ ಗಂಟೆಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿತು. ಬೆಳಿಗ್ಗೆಯಿಂದಲೇ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ನೇರವೇರಿತು. ಪ್ರಾತಃ ಕಾಲ ಪೂಜೆಯಲ್ಲಿ ಆನುವಂಶಿಕ ಧರ್ಮದರ್ಶಿ ಎಸ್ ರಾಮಪ್ಪ ದೇವಸ್ಥಾನದಲ್ಲಿನ ಧಾರ್ಮಿಕ, ಸಾಮಾಜಿಕ ಹಾಗೂ ಸಮಾಸೇವಾ ಚಟುವಟಿಕೆಗಳ ಬಗ್ಗೆ ಮುರುಘಾ ರಾಜೇಂದ್ರ ಸ್ವಾಮೀಜಿಗಳಿಗೆ ವಿವರಿಸಿದರು.

ದೇವಸ್ಥಾನದಲ್ಲಿ ಚಂಡಿಕಾ ಹೋಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ನಡೆಯಿತು. ಸಂಜೆ ದೀಪೋತ್ಸವ ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರು ಆದಿಶಕ್ತಿ ಭಜನಾ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಹೆಚ್ ಇದ್ದರು.

Ad Widget

Related posts

ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಕಟ್ಟು ಬೀಳಬಾರದು, ಮಲೆನಾಡು ಮಿತ್ರ’ಪತ್ರಿಕೆ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಸವಕೇಂದ್ರ ಆಶಯ

Malenadu Mirror Desk

ಆಯನೂರು ಮಂಜುನಾಥ ಗೆಲುವು, ಪಕ್ಷದ ಗೆಲುವು’

Malenadu Mirror Desk

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.