Malenadu Mitra
ರಾಜ್ಯಶಿವಮೊಗ್ಗ

ಆನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

ಶಿವಮೊಗ್ಗ ತಾಲೂಕು ಪುರದಾಳು ಗ್ರಾಮಪಂಚಾಯಿತಿ ಆಲದೇವರ ಹೊಸೂರಿನಲ್ಲಿ ಕಾಡಾನೆ ತುಳಿದು ಹನುಮಂತ (50) ಸಾವುಗೀಡಾಗಿದ್ದಾರೆ.

ಶನಿವಾರ ಸಂಜೆ 6.30 ರ ಸಮಯದಲ್ಲಿ ಪುರದಾಳು ಗ್ರಾಮದಿಂದ ಆಲದೇವರ ಹೊಸೂರಿಗೆ ಬರುತಿದ್ದ ಹನುಮಂತ ಅವರಿಗೆ ಆನೆ ಎದುರಾಗಿದೆ. ತಕ್ಷಣ ಬೆನ್ನತ್ತಿದ ಆನೆ ಕ್ಷಣಮಾತಗರದಲ್ಲಿ ತುಳಿದ ಸಾಯಿಸಿದೆ.

ಹಾವೇರಿ ಮೂಲದ ಹನುಮಂತಪ್ಪ ಕುಟುಂಬ ಶ್ರೀಧರ್ ಎನ್ನುವವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತಿದ್ದರು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದರು.

ಪುರದಾಳು ಗ್ರಾಮದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು,ರೈತರ ಬೆಳೆ ಹಾನಿ ನಿರಂತರವಾಗಿದೆ. ಆಲದೇವರ ಹೊಸೂರು ಸಮೀಪ ಕಾಡಾನೆಗಳು ಮತ್ತ್ತೆ ಮತ್ತೆ ದಾಳಿ ಮಾಡುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

Ad Widget

Related posts

ಎಡದಂಡೆಗೆ ಜ.೧೦ ಮತ್ತು ಬಲದಂಡೆ ನಾಲೆಗೆ ಜ.೨೦ ರಿಂದ ನೀರು : ಕಾಡಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ

Malenadu Mirror Desk

ಮಲೆನಾಡಿನ ಹೆಮ್ಮೆಯ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಅಮೃತ ಮಹೋತ್ಸವ ಸಂಭ್ರಮ: ಎನ್‌ಇಎಸ್‌ ವಿಶೇಷ ಅಂಚೆ ಲಕೋಟೆ ಬಿಡುಗಡೆ, ಡಾ.ಶಿವನ್‌ರಿಂದ ಉಪನ್ಯಾಸ

Malenadu Mirror Desk

ರಾಜ್ಯ ಸರ್ಕಾರದಿಂದ ಕಾರ್ಮಿಕರಲ್ಲಿ ವಿಶ್ವಾಸ ತುಂಬುವ ಕೆಲಸ : ಸಚಿವ ಶಿವರಾಮ್ ಹೆಬ್ಬಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.