Malenadu Mitra
Uncategorized

ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ.

ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ನೇಮನಾಯ್ಕ್, ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿದ್ದರು. ಜೊತೆಗೆ ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗ ಭಾಧಿಸಿದ್ದರಿಂದ ಬೇಸತ್ತು, ನಿನ್ನೆ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರೈತ ನೇಮನಾಯ್ಕ್ ಸಾವನ್ನಪ್ಪಿದ್ದಾರೆ.

ರೈತ ಆತ್ಮಹತ್ಯೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ನೆಹರು ಸದೃಢ ಭಾರತದ ನಿರ್ಮಾತೃ

Malenadu Mirror Desk

ವಿದ್ಯುತ್ ಅವಘಡ : ರೈತ ಸಾವು

Malenadu Mirror Desk

ಕೊರೊನಾ ಸೋಂಕು ಹೆಚ್ಚಳ ಜೂನ್7ರ ವರೆಗೆ ರಿಪ್ಪನ್‌ಪೇಟೆ ಸಂಪೂರ್ಣ ಲಾಕ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.