Malenadu Mitra
Uncategorized

ಬೆಳ್ಳಂಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿ: ಹಲವರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಪಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.
ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗೊಂಡಿದ್ದಾರೆ. ಬಸ್ ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಬಸ್ ಚಲಾಯಿಸಿ, ಹಂಪ್ ಹಾರಿಸಿದ ಪರಿಣಾಮ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಬ್ಬಿಣದ ಫೆನ್ಸಿಂಗ್ ದಾಟಿ, ಚರಂಡಿಗೆ ಬಸ್ ಬಿದ್ದಿದೆ.
ಇಬ್ಬರಿಗೆ ತೀವ್ರ ಗಾಯ- ಗಾಯಾಳುಗಳು ಮೆಗ್ಗಾನ್ ಗೆ ಶಿಫ್ಟ್:


ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ಹೊರಟಿದ್ದ ಸಿಟಿ ಬಸ್ ನಲ್ಲಿ ಸುಮಾರು 20 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಎಲ್ಲಾ 6 ಜನ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Related posts

ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಕೋರಿಕೆ

Malenadu Mirror Desk

ವಿಮಾನ ನಿಲ್ದಾಣ ವಿನ್ಯಾಸ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ : ಕಾಂಗ್ರೆಸ್

Malenadu Mirror Desk

ಬಜೆಟ್ನಲ್ಲಿ ಅನುದಾನ ಮೀಸಲಿಡಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.