Malenadu Mitra
ಜಿಲ್ಲೆತೀರ್ಥಹಳ್ಳಿರಾಜ್ಯಶಿವಮೊಗ್ಗ

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಲಾಡ್ಜ್ ವೊಂದರಲ್ಲಿ ತಹಶೀಲ್ದಾರ್ ಜಿ.ಬಿ.ಜಕ್ಕಣ್ಣ ಗೌಡರ್ ಮೃತದೇಹ ಪತ್ತೆಯಾಗಿದೆ.
ಹೈಕೋರ್ಟ್ ಕೆಲಸದ ನಿಮಿತ್ತ ತಹಶೀಲ್ದಾರ್ ಮಂಗಳವಾರ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಫೋನ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ನೌಕರರು ಸಂಪರ್ಕ ಸಾಧಿಸುವ ಪ್ರಯತ್ನ ನಡೆಸಿದ್ದು, ಮೃತದೇಹ ಪತ್ತೆಯಾಗಿದೆ.
ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ತಹಶೀಲ್ದಾರ್ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಆರಗ ಜ್ಞಾನೇಂದ್ರ

ಇನ್ನು ನ್ಯಾಯಾಲಯದ ಕೆಲಸದ ಸಲುವಾಗಿ ಬೆಂಗಳೂರಿಗೆ ತೆರಳಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ತಾವು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಆಕಸ್ಮಿಕ ಮರಣ ಹೊಂದಿರುವುದು ತೀವ್ರ ಆಘಾತ ತಂದಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ತಹಶೀಲ್ದಾರ್ ಪಾರ್ಥಿವ ಶರೀರ ಇದ್ದ ಬೆಂಗಳೂರಿನ ಹೋಟೆಲ್ ಗೆ ಭೇಟಿ ನೀಡಿದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ, ತಹಶೀಲ್ದಾರ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

Ad Widget

Related posts

ಜಿಎಸ್‌ಟ್ಟಿ ಹೇರಿಕೆಯಿಂದ ಜನರಿಗೆ ದ್ರೋಹ : ಡಾ. ಶ್ರೀನಿವಾಸ್ ಕರಿಯಣ್ಣ

Malenadu Mirror Desk

ಕುವೆಂಪು ವಿವಿಯಲ್ಲಿ ಆನ್‌ಲೈನ್ ಕೋರ್ಸ್ ಪ್ರಾರಂಭಕ್ಕೆ ಯುಜಿಸಿ ಅನುಮತಿ

Malenadu Mirror Desk

ಉದ್ಯೋಗದಲ್ಲಿ ಕೌಶಲ್ಯವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ : ಎಡಿಸಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.