Malenadu Mitra
ತೀರ್ಥಹಳ್ಳಿಶಿವಮೊಗ್ಗ

ಮೊಬೈಲ್, ಚಪ್ಪಲಿ ಬಿಟ್ಟು ತುಂಗಾ ನದಿಗೆ ಹಾರಿದ ವ್ಯಕ್ತಿ : ಮುಂದುವರಿದ ಶೋಧ

ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ.
ತೀರ್ಥಹಳ್ಳಿ ಪಟ್ಟಣದ ಕಮಾನು ಸೇತುವೆ ಬಳಿ ಘಟನೆ ನಡೆದಿದ್ದು, ನದಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ದೊರೆತ ಮೊಬೈಲ್ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು, ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಬ್ಯಾಂಕ್ ಮ್ಯಾನೇಜರ್ ಒಬ್ಬರೇ ಇದ್ದರು. ಸಂಬಂಧಿಕರು ಚೆನ್ನೈ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕವಷ್ಟೇ ಯಾರು, ಎನು? ಎಂಬುದರ ಕುರಿತು ಮಾಹಿತಿ ಲಭ್ಯವಾಗಲಿದೆ.

Ad Widget

Related posts

ಹಾಸ್ಟೆಲ್‌ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ, ಆಡಳಿತ ವ್ಯವಸ್ಥೆ ವಿರುದ್ದ ಹರಿಹಾಯ್ದ ವಿದ್ಯಾರ್ಥಿನಿಯರು

Malenadu Mirror Desk

ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಕಾಡಾನೆ ಪರೇಡ್ , ಇಳಿ ಸಂಜೆಗೇ ಬಂದ ಗಜರಾಜನಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕದಲ್ಲಿ

Malenadu Mirror Desk

ಹಿಜಾಬ್ ತೀರ್ಪು ಹಿನ್ನೆಲೆ : ಜಿಲ್ಲಾದ್ಯಂತ ಶಾಲಾ ಕಾಲೇಜು ರಜೆ, 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.