Malenadu Mitra
ಜಿಲ್ಲೆಶಿವಮೊಗ್ಗ

ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಭೀಕರ ಹತ್ಯೆ.

ಶಿವಮೊಗ್ಗ : ನಗರದಲ್ಲಿ ಹಲವು ತಿಂಗಳ ಬಳಿಕ ಮತ್ತೆ ನೆತ್ತರು ಹರಿದಿದ್ದು, ರೌಡಿಶೀಟರ್ ನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.
ನಗರದ ಹಳೇ ಬೊಮ್ಮನಕಟ್ಟೆ ಬಳಿ ಮಧ್ಯಾಹ್ನ ಘಟನೆ ನಡೆದಿದ್ದು, ರೌಡಿಶೀಟರ್ ರಾಜೇಶ್ ಶೆಟ್ಟಿ ಭೀಕರವಾಗಿ ಕೊಲೆಯಾಗಿದ್ದಾನೆ.
ಬೊಮ್ಮನಕಟ್ಟೆ ಬಳಿ ನಿಂತಿದ್ದ ರಾಜೇಶ್ ಶೆಟ್ಟಿ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹಳೆಯ ದ್ವೇಷದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಚಳವಳಿಯ ಕುಲುಮೆಯಲ್ಲಿ ಅರಳಿದ ಹೂವು ಕಾಗೋಡು, ಅಭಿನಂದನಾ ಸಮಾರಂಭದಲ್ಲಿ ಮುತ್ಸದ್ದಿ ರಾಜಕಾರಣಿಯನ್ನು ಕೊಂಡಾಡಿದ ಗಣ್ಯರು

Malenadu Mirror Desk

ಗಾಂಜಾ ಗುಂಗಿನಲ್ಲಿ ದಾಂಧಲೆ,ಪುಂಡರ ಬಂಧನ

Malenadu Mirror Desk

ಕೊರೊನ ಸಂತ್ರಸ್ಥರ ನೋವಿಗೆ ಮಿಡಿದ ಮಲೆನಾಡಿಗರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.