Malenadu Mitra
ರಾಜ್ಯಶಿವಮೊಗ್ಗ

ರಾಜ್ಯ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

ಶಿವಮೊಗ್ಗ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸೀನಿಯರ್ಸ್ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗದ ಅದಿತಿ. ಆರ್ ಅಯ್ಕೆಯಾಗಿದ್ದಾರೆ.
ಡಿಸೆಂಬರ್ 4 ರಿಂದ 16 ವರೆಗೆ ಹರಿಯಾಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿದ್ದು, ಶಿವಮೊಗ್ಗದ ಅದಿತಿ ರಾಜೇಶ್ ರಾಜ್ಯ ತಂಡವನ್ನ ಪ್ರತಿನಿಧಿಸಲಿದ್ದಾರೆ.
ಅಂತರಾಷ್ಟ್ರೀಯ ಕ್ರೀಡಾಪಟು ವೇದಾ ಕೃಷ್ಣಮೂರ್ತಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.
ಶಿವಮೊಗ್ಗದ ಅದಿತಿ ರಾಜೇಶ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಅದಿತಿ ಆಯ್ಕೆಗೆ ಶಿವಮೊಗ್ಗದ ಕ್ರೀಡಾಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Ad Widget

Related posts

ಶ್ರೀಕಾಂತ್ ಜಿಲ್ಲಾ ಜೆಡಿಎಸ್ ಸಾರಥ್ಯ ವಹಿಸಲಿ

Malenadu Mirror Desk

ಶಿವಮೊಗ್ಗ ಸಾಹಿತ್ಯ ಪರಿಷತ್ ಚುನಾವಣೆ: ಯಾರಿಗೆ ಎಷ್ಟು ಮತ ಗೊತ್ತಾ ?

Malenadu Mirror Desk

ವಿಎಸ್‍ಐಎಲ್ ಆಮ್ಲಜನಕ ಘಟಕಕ್ಕೆ ಶೆಟ್ಟರ್ ಭೇಟಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.