Malenadu Mitra
ಶಿವಮೊಗ್ಗ

ಸೂಡೂರು ಗೇಟ್ ಬಳಿ ಅಪಘಾತ : ಯುವಕ ಸಾವು

ಶಿವಮೊಗ್ಗ: ತಾಲೂಕಿನ ಸೂಡೂರು ಗೇಟ್ ಬಳಿಯಿರುವ ದೇವಸ್ಥಾನದ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಕಳಸ ಗ್ರಾಮದ ಮನೋಜ್ (19) ಮೃತಪಟ್ಟ ದುರ್ಧೈವಿ.
ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಗಾಯಗೊಂಡಿದ್ದರು. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದರೇ, ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು ಸ್ಥಿತಿ ಗಂಭೀರವಾಗಿದೆ.
ರಿಪ್ಪನ್‌ಪೇಟೆಯ ಯುವಕ ಮನ್ವಿತ್ ಭಂಡಾರಿಗೆ ಸಹ ಗಾಯವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಮಲೆನಾಡಲ್ಲಿ ಮಳೆಯ ಸಂಭ್ರಮ, ಜೋಗದಲ್ಲಿ ಜಲ ಚಿತ್ತಾರ, ಪ್ರವಾಸಿಗರ ಹರ್ಷ

Malenadu Mirror Desk

ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ

Malenadu Mirror Desk

ಅಮ್ಮ.. ನಮ್ಮನ್ನು ಕೊಂದು ಬಿಟ್ಟೆಯಾ ?..

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.