Malenadu Mitra
ರಾಜ್ಯಶಿವಮೊಗ್ಗಸಾಗರ

ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ: ಪ್ರವಾಸಿಗರಿಗೆ ಮೂರು ತಿಂಗಳು ನಿರ್ಭಂದ

ಶಿವಮೊಗ್ಗ : ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, 2025 ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮನವಿ ಮಾಡಿದ್ದಾರೆ.

Ad Widget

Related posts

ಶಿವಮೊಗ್ಗ ಭಾಗಶಃ ಅನ್ಲಾಕ್, ಷರತ್ತುಗಳಿವೆ ಎಚ್ಚರಿಕೆ

Malenadu Mirror Desk

ಶಿವಮೊಗ್ಗ.ಜಿ ಪಂ. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ

Malenadu Mirror Desk

ಈಶ್ವರಪ್ಪ ವಿರುದ್ಧದ ಆಯನೂರು ಹೇಳಿಕೆಯ ಹಿಂದಿನ ಮರ್ಮ ಏನು ?,
ಸೌಹಾರ್ದ ಶಿವಮೊಗ್ಗ ಘೋಷಣೆಯೊಂದಿಗೆ ಕಣಕ್ಕಿಳಿಯಲು ಮಂಜಣ್ಣ ತಾಲೀಮು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.