Malenadu Mitra
ರಾಜ್ಯಶಿವಮೊಗ್ಗ

ಶರಾವತಿ ಹಿನ್ನೀರ ಯುವಕರ ಸಾಧನೆ: ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಮೂವರು ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಮೂವರು ಯುವಕರು ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಕರೂರು ಹೋಬಳಿಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಇಲ್ಲಿನ ಮಳೂರು ಗ್ರಾಮದ ಕೀರ್ತನ್. ಆರ್, ಕಿರೇತೋಡಿ ಗ್ರಾಮದ ಗಣೇಶ್.ಎಂ ಹಾಗೂ ಹೊನಗಲು ಗ್ರಾಮದ ಮಣಿಕಂಠ.ಎಂ.ಸಿ ಆಯ್ಕೆಯಾಗಿದ್ದಾರೆ.
ಇವರೆಲ್ಲರೂ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಯುವಕರ ಸಾಧನೆಗೆ ಹಿನ್ನೀರ ಭಾಗದ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

Ad Widget

Related posts

ಮಾಜಿ ಆದ್ರೇನ್ …ಬಾಸು … ಮಾಸೇ ಗುರು…

Malenadu Mirror Desk

ಬೇಳೂರು ಪರ ಶಿವಣ್ಣ ಮತಯಾಚನೆ
ಭರ್ಜರಿ ರೋಡ್ ಶೋನಲ್ಲಿ ನೆಚ್ಚಿನ ನಟನ ನೋಡಲು ಮುಗಿಬಿದ್ದ ಜನ

Malenadu Mirror Desk

ಒಳಮೀಸಲಾತಿಯಲ್ಲಿ ಬಂಜಾರರಿಗೆ ನ್ಯಾಯ ಸಿಕ್ಕಿದೆ: ಶಾಸಕ ಅಶೋಕ್ ನಾಯ್ಕ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.