Malenadu Mitra
Uncategorizedರಾಜ್ಯಶಿವಮೊಗ್ಗ

ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: 7 ಜನರಿಗೆ ಗಾಯ- ಓರ್ವ ಮಿಸ್ಸಿಂಗ್

ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ.
ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಜನರು ಗಾಯಗೊಂಡು, ರಘು ಎಂಬ ವ್ಯಕ್ತಿ ಕಣ್ಮರೆಯಾಗಿದ್ದಾರೆ.

ಗಾಯಾಳುಗಳನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಯ್ಲರ್ ಸ್ಫೋಟದ ತೀವ್ರತೆಗೆ ಮಿಲ್ ಇದ್ದ ಕಟ್ಟಡ ಭಾಗಶಃ ಕುಸಿದಿದೆ. ಅಲ್ಲದೇ, ಹಿಂಭಾಗದ ಎರಡು ಅಂತಸ್ತಿನ ಮನೆ ಸಹ ಸಂಪೂರ್ಣವಾಗಿ ಕುಸಿದಿದೆ.

‘ಭದ್ರಾವತಿ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟ ಸಂಭವಿಸಿದೆ. 7 ಮಂದಿ ಗಾಯಗೊಂಡಿದ್ದು, ಎಲ್ಲರು ಅಪಾಯದಿಂದ ಪಾರಾಗಿದ್ದಾರೆ. ಎಲ್ಲರಿಗು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಘು ಎಂಬಾತ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

-ಜಿ‌.ಕೆ.ಮಿಥುನ್ ಕುಮಾರ್ : ಶಿವಮೊಗ್ಗ ಎಸ್ಪಿ

ಸ್ಫೋಟದ ಬಳಿಕ ಸೀಗೆಬಾಗಿ ಸುತ್ತಮುತ್ತ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು,ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಲೈನ್‌ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಸ್ಫೋಟದ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಆಂಬುಲೆನ್ಸ್‌, ಮೆಸ್ಕಾಂ, ನಗರಸಭೆ, ಕಂದಾಯ ಇಲಾಖೆ ಅಧಿಕಾರಿಗಳು ಬೀಡು ಬಿಟ್ಟಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ.

Ad Widget

Related posts

ನಮ್ಮ ರಾಮ ಹೊಲಗದ್ದೆಗಳಲ್ಲಿದ್ದಾನೆ: ಯುದ್ಧವೀರ್ ಸಿಂಗ್

Malenadu Mirror Desk

ಎನ್ ಇ ಎಸ್ ಅಮೃತ ಮಹೋತ್ಸವದ ಸಮಾರೋಪಕ್ಕೆ ಅದ್ದೂರಿ ಸಿದ್ಧತೆ

Malenadu Mirror Desk

ಕಾಗೋಡು ತಿಮ್ಮಪ್ಪ ಯೋಗಕ್ಷೇಮ ವಿಚಾರಿಸಿದ ಹೋಮ್ ಮಿನಿಸ್ಟರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.