Malenadu Mitra
ರಾಜ್ಯಶಿವಮೊಗ್ಗ

ರೇಣುಕಾಸ್ವಾಮಿ ಮರ್ಡರ್ ಕೇಸ್ : ಎ-6 ಜಗದೀಶ್ ಜೈಲಿನಿಂದ ಬಿಡುಗಡೆ

ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಬುಧವಾರ ಸಂಜೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ.
ಹೈಕೋರ್ಟ್ ಜಾಮೀನು ಮಂಜೂರು ನಂತರವೂ ಶ್ಯೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ‌ ತಡವಾಗಿ ಜೈಲಿನಿಂದ ಹೊರಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದು, ಅವರ ಜೊತೆಗೆ ತೆರಳಿದ್ದಾನೆ.
ಜಗದೀಶ್ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ಯುವ ತಂಡದಲ್ಲಿದ್ದ ಜಗದೀಶ್ 6 ನೇ ಆರೋಪಿಯಾಗಿದ್ದ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಆರೋಪದ ಹಿನ್ನೆಲೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾಯಿಸಲಾಗಿತ್ತು. ಆಗಸ್ಟ್ 29 ರಂದು ಆರೋಪಿಗಳಾದ ಜಗದೀಶ್ ಮತ್ತು ಲಕ್ಷಣ್ ರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ನ್ಯಾಯಾಲಯ ಜಾಮೀನು ಪ್ರಕಟಿಸಿದ ಹಿನ್ನೆಲೆ ಮಂಗಳವಾರ ಲಕ್ಷಣ್ ಬಿಡುಗಡೆಯಾಗಿದ್ದ. ಇದೀಗ ಶ್ಯೂರಿಟಿ ಸಿಕ್ಕ ಹಿನ್ನೆಲೆಯಲ್ಲಿ ಜಗದೀಶ್ ಕೂಡ ಬಿಡುಗಡೆಯಾಗಿದ್ದಾನೆ.

Ad Widget

Related posts

ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಗೋಪಾಲ್ ಯಡಗೆರೆ ಅಧ್ಯಕ್ಷ, ಸಂತೋಷ್ ಪ್ರಧಾನ ಕಾರ್ಯದರ್ಶಿ

Malenadu Mirror Desk

ಪತಿಯಿಂದ ಪತ್ನಿಯ ಕೊಲೆ: ಆರೋಪಿ ವಶಕ್ಕೆ

Malenadu Mirror Desk

ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ: ಪ್ರವಾಸಿಗರಿಗೆ ಮೂರು ತಿಂಗಳು ನಿರ್ಭಂದ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.