Malenadu Mitra
ರಾಜ್ಯಶಿವಮೊಗ್ಗ

ಹ್ಯಾಟ್ರಿಕ್ ಹಿರೋ ಗೆ ಶಸ್ತ್ರಚಿಕಿತ್ಸೆ: ಶ್ರೀಕಾಂತ್ ಅಭಿಮಾನಿ ಬಳಗದಿಂದ ವಿಶೇಷ ಪೂಜೆ

ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಿದ್ದು, ಬೇಗನೆ ಗುಣಮುಖರಾಗಿ ಕರುನಾಡಿಗೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಬಸವರಾಜ್, ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.

Ad Widget

Related posts

ಪರಿಸರ ಉಳಿದರೆ ಮಾತ್ರ ಮನುಕುಲದ ಆರೋಗ್ಯ

Malenadu Mirror Desk

ಸೊರಬ ಜನಕ್ಕೆ ಸ್ವಾಭಿಮಾನಿ ಬದುಕು ಕೊಡುವೆ, ಬಂಗಾರಪ್ಪರ ಅನುಷ್ಠಾನಕ್ಕೆ ಬದ್ಧನಾಗುವೆ: ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ಭರವಸೆ

Malenadu Mirror Desk

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದವರಿಗೆ ಅನ್ಯಾಯ, ಸರಕಾರದ ಯೋಜನೆಗಳ ಜಾರಿಯಲ್ಲಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.