Malenadu Mitra
ರಾಜ್ಯಶಿವಮೊಗ್ಗ

ಹ್ಯಾಟ್ರಿಕ್ ಹಿರೋ ಗೆ ಶಸ್ತ್ರಚಿಕಿತ್ಸೆ: ಶ್ರೀಕಾಂತ್ ಅಭಿಮಾನಿ ಬಳಗದಿಂದ ವಿಶೇಷ ಪೂಜೆ

ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಿದ್ದು, ಬೇಗನೆ ಗುಣಮುಖರಾಗಿ ಕರುನಾಡಿಗೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಬಸವರಾಜ್, ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.

Ad Widget

Related posts

ಶಿವಮೊಗ್ಗದಲ್ಲಿ ಡಿವಿಜಿ ಪಾರ್ಕ್ಗೆ ಅಡಿಗಲ್ಲು

Malenadu Mirror Desk

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk

ಹಣಗೆರೆಕಟ್ಟೆ ಲಾಜ್ ನಲ್ಲಿ ಮಹಿಳಾ ಪ್ರವಾಸಿ ಕೊಲೆ, ಮೃತದೇಹ ಪತ್ತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.