Malenadu Mitra
ಜಿಲ್ಲೆ

ಮೊಬೈಲ್ ಬಳಸದಂತೆ ತಾಯಿ ಬುದ್ದಿಮಾತು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ :ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು, ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯ ಧನುಶ್ರೀ(20) ಮೃತ ವಿದ್ಯಾರ್ಥಿನಿ.
ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ಧನುಶ್ರೀ ಅವರ ತಾಯಿ ಬೈದು, ಓದುವಂತೆ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದಿದ್ದ ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೇ ಆಕೆಯನ್ನು ಆಯನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ‌ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಡಿ.23 ರ ಸೋಮವಾರ ವಿಷ ಸೇವಿಸಿದ್ದ ಧನುಶ್ರೀ, ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ- ಇಬ್ಬರು ಯುವಕರು ಸಾವು

Malenadu Mirror Desk

ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ

Malenadu Mirror Desk

ಪೋಷಕರ ಸ್ಮರಣಾರ್ಥ: ಪ್ರತಿಭಾನ್ವಿತರಿಗೆ ಸತೀಶ್ ಬೇಗುವಳ್ಳಿ ಕುಟುಂಬಸ್ಥರಿಂದ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.