Malenadu Mitra
ಜಿಲ್ಲೆಶಿವಮೊಗ್ಗಸಾಗರ

ಆನಂದಪುರ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಆನಂದಪುರ ಸಮೀಪ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದೆ.
ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Related posts

ಹರ್ಷ ಕೊಲೆ ಆರೋಪಿಗಳು 11 ದಿನ ಪೊಲೀಸ್ ಕಸ್ಟಡಿಗೆ,ಕೊಲೆಗೆ ಹೊರ ರಾಜ್ಯದ ಕಾರು ಬಳಕೆ, ವಿಡಿಯೊ ಕಾಲ್ ಮಾಡಿದ ಹುಡುಗಿಯರು ಪತ್ತೆ

Malenadu Mirror Desk

ಪರಿಸರ ವಿರೋಧಿ ಯೋಜನೆಗಳಿಗೆ ವಿರೋಧಿಸಲು ಹಿಂಜರಿಯಬಾರದು:ಪ್ರೊ.ಬಿ.ಎಂ.ಕುಮಾರಸ್ವಾಮಿ

Malenadu Mirror Desk

ಅಪಾಯದ ಮಟ್ಟದಲಿ ತುಂಗಾ, ಪ್ರವಾಹದ ಭೀತಿ ಜೋಗದಲ್ಲಿ ರುದ್ರ ರಮಣೀಯ ದೃಶ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.