Malenadu Mitra
ರಾಜ್ಯಶಿವಮೊಗ್ಗ

ನಕ್ಸಲ್ ಮುಂಡಗಾರು ಲತಾ ಶಿವಮೊಗ್ಗ ಪೊಲೀಸರ ವಶಕ್ಕೆ: ಇಂದೇ ತೀರ್ಥಹಳ್ಳಿ ಕೋರ್ಟ್ ಗೆ

ಶಿವಮೊಗ್ಗ: ಕಳೆದ ತಿಂಗಳಷ್ಟೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.
ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್ ಗೆ ಹಾಜರು ಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್ ಗೂ ಹಾಜರು ಪಡಿಸಲಿದ್ದು, ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಶಿವಮೊಗ್ಗ ಪೊಲೀಸರು ಪಡೆದು, ಕರೆತರುತ್ತಿರುವ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು(12/9, 51/09 ಹಾಗೂ 03/12) ಕೇಸ್ ದಾಖಲಾಗಿವೆ. ಅದೇ ರೀತಿ ವನಜಾಕ್ಷಿ ವಿರುದ್ಧ ಸಹ ಕೇಸ್ ದಾಖಲಾಗಿದ್ದು, ಅದೇ ಪ್ರಕರಣಗಳಲ್ಲಿ ಇಂದು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

Ad Widget

Related posts

ಗುರಿಯಿದ್ದರೆ ಮಾತ್ರ ಯಶಸ್ಸು ಸಾಧ್ಯ :ಎಸ್.ಎನ್.ನಾಗರಾಜ್‌ , ಬಿ.ಆರ್‌.ಪಿ.ರಾಷ್ಟ್ರೀಯ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Malenadu Mirror Desk

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk

ಬಲಿಷ್ಠ ಸಂವಿಧಾನದಿಂದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.