Malenadu Mitra
ಜಿಲ್ಲೆಶಿವಮೊಗ್ಗಸಾಗರಸಾಹಿತ್ಯ

ಹಸೆ ಚಿತ್ತಾರವನ್ನು ಪಠ್ಯಕ್ರಮದಲ್ಲಿ ಸೇರಿಸಲು ಕ್ರಮ: ಸಚಿವ ಮಧು ಬಂಗಾರಪ್ಪ

ಬಲೆಗಾರು/ಸಾಗರ:’ಮಲೆನಾಡಿನ ದೀವರು ಸಮುದಾಯ ಪೋಷಿಸಿಕೊಂಡು ಬಂದಿರುವ ಹಸೆ ಚಿತ್ತಾರ ಕಲೆಯನ್ನು ಶಾಲೆಗಳ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರದ ಬಲೆಗಾರು ಗ್ರಾಮದಲ್ಲಿ ಭಾನುವಾರ ಕರ್ನಾಟಕ ದೀವರು ಸಾಂಸ್ಕೃತಿಕ ಅಧ್ಯಯನ ಸಂಸ್ಥೆ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಚಾಲನೆ‌ ಹಾಗೂ ದೀವರು ಹಸೆ ಚಿತ್ತಾರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಸೆ ಚಿತ್ತಾರದಂತ ಕಲೆಯು ಸಾವಿರಾರು ವರ್ಷಗಳಿಂದ ಮಹಿಳೆಯರು ಕಾಪಿಟ್ಟುಕೊಂಡು ಬಂದಿದ್ದು, ಕರ್ನಾಟಕದ ನೆಲಮೂಲದ ಕಲೆಯಾಗಿದೆ. ಇದರ ಪ್ರೋತ್ಸಾಹಕ್ಕೆ ಹಾಗೂ ನಮ್ಮ ಸಂಸ್ಕೃತಿ ಕಲೆಗಳ ಉಳಿವಿಗೆ ನಾನು ನಿಮ್ಮ ಸಂಸ್ಥೆಯ ಪ್ರಯತ್ನಕ್ಕೆ  ಕೈಜೋಡಿಸುತ್ತೇನೆ ಎಂದವರು ಹೇಳಿ ಸಂಸ್ಥೆಗೆ ಶುಭಹಾರೈಸಿದರು.‌

ಇದಕ್ಕೂ ಮೊದಲು ಹಸೆ ಚಿತ್ತಾರ ಕ್ಯಾಲೆಂಡರ್ ಬಿಡುಗಡೆಗೊಳಿದ ಮಾಜಿ ಸಭಾಪತಿ ಡಾ. ಕಾಗೋಡು ತಿಮ್ಮಪ್ಪ,’ನಮ್ಮ ಹೊಸ ತಲೆಮಾರು ಇಂತಹ ಕ್ಯಾಲೆಂಡರ್ ಮೂಲಕ ಸಂಸ್ಕೃತಿಯನ್ನು ಉಳಿಸುತ್ತಿರುವುದು ಮತ್ತು ಹಿಂದೆ ನಡೆದ ಹೋರಾಟಗಳನ್ನು ಕ್ಯಾಲೆಂಡರ್ ಮುಖಾಂತರ ಸ್ಮರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ದೀವರು ಹಸೆ ಚಿತ್ತಾರ ಕಲಾವಿದೆಯರಾದ ಲಕ್ಷ್ಮಮ್ಮ ಗಡೆಮನೆ, ರಾದಾ ಸುಳ್ಳೂರು, ಸ್ವಾತಿ ಪುನೀತ್ ಹಾಗೂ ಪವಿತ್ರಾ ಮೋಹನ್ ನಾಯ್ಕ್ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ರೈತ ಹೋರಾಟಗಾರ ಶಿವಾನಂದ ಕುಗ್ವೆ, ಈಶ್ವರನಾಯ್ಕ, ಎಸ್.ಪಿ ಕೆರಿಯಪ್ಪ, ಸಂಧ್ಯಾ ಸಿಗಂದೂರು, ವಿದ್ಯಾ ಸುಳ್ಳಳ್ಳಿ ಉಪಸ್ಥಿತರಿದ್ದರು.

ದಿವ್ಯಶ್ರೀ ಅದರಂತೆ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಂಸ್ಥೆಯ ಸಂಚಾಲಕ ವೆಂಕಟೇಶ್ ಮೆಳವರಿಗೆ ಎಲ್ಲರನ್ನು ವಂದಿಸಿದರು.

Ad Widget

Related posts

ಅಡಕೆ ಬೆಳೆಯಿಂದಾಗಿ ಒಕ್ಕಲಿಗರ ಬಾಳು ಹಸನು, ಒಕ್ಕಲಿಗರ ಯುವ ಸಮಾವೇಶ ಉದ್ಘಾಟಿಸಿದ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ

Malenadu Mirror Desk

ಸಾಮೂಹಿಕ ನಾಯಕತ್ವ: ಶಾ ಹೇಳಿಕೆಗೆ ಈಶ್ವರಪ್ಪ ತದ್ವಿರುದ್ಧ ಹೇಳಿಕೆ

Malenadu Mirror Desk

ಅತಿ ಹಿಂದುಳಿದ ವರ್ಗಗಳ ಜನಜಾಗೃತಿ: ಚಿಂತನ- ಮಂಥನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.