Malenadu Mitra
ರಾಜ್ಯಶಿವಮೊಗ್ಗ

ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭ

ಕಳೆದ ಒಂದು ವಾರದಿಂದ ಬಂದ್ ಆಗಿದ್ದ ಶಿವಮೊಗ್ಗ ನಗರದ ಶಾಲಾ ಕಾಲೇಜು ಆರಂಭವಾಗಲಿವೆ.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಈ ಆದೇಶ ಹೊರಡಿಸಿದ್ದಾರೆ. ಹಿಜಾಬ್ -ಕೇಸರಿ ಶಾಲು ಗಲಾಟೆ ,ಅದಾದ ಬಳಿಕ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದಾಗಿ ನಗರದಲ್ಲಿ ಕರ್ಫ್ಯೂ ವಿದಿಸಲಾಗಿತ್ತು

. ನಗರದಲ್ಲಿ ಕಳೆದ ಹದಿನೈದು ದಿನಗಳಿಂದ ಸರಿಯಾಗಿ ಶಾಲಾ ಕಾಲೇಜುಗಳು ನಡೆದಿರಲಿಲ್ಲ. ಇದರಿಂದ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆಗಳಿಗೂ ತೊಂದರೆ ಯಾಗಿತ್ತು. ಎರಡು ವರ್ಷಗಳಿಂದ ಕೊರೊನ ಸಮಯದಲ್ಲಿ ಮಕ್ಕಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮವಾಗಿತ್ತು. ಈಗ ಈ ಗಲಭೆಗಳ ಕಾರಣಕ್ಕೆ ಶಾಲಾ ಕಾಲೇಜುಗಳು ಬಂದ್ ಆಗಿದ್ದವು.

ಸೋಮವಾರದಿಂದ ಕಾಲೇಜು ಆರಂಬಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದು, ನಾಗರೀಕರು ಶಾಂತಿ ಸುವ್ಯವಸ್ಥೆಗೆ ಆದ್ಯತೆ ನೀಡಬೇಕಿದೆ

Ad Widget

Related posts

ಗೆಳೆಯನೆಂಬ ಪಥಿಕನಜೊತೆ ಪಥವನರಸಿ…

Malenadu Mirror Desk

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk

ಮಾದ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ:೧೨೪ ಪತ್ರಕರ್ತರ ಆಯ್ಕೆ-೨೧ ಪತ್ರಕರ್ತರಿಗೆ ದತ್ತಿ ಪ್ರಶಸ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.