Malenadu Mitra
ರಾಜ್ಯಶಿವಮೊಗ್ಗ

ಪೊಲೀಸ್ ಪೇದೆ ಎದೆಗೆ ಚಾಕು ಹಾಕಿದ್ದ ಆರೋಪಿಯ ಕಾಲಿಗೆ ಫೈರಿಂಗ್ ಮೆಗ್ಗಾನ್‌ನಲ್ಲಿ ಚಿಕಿತ್ಸೆ, ಪೇದೆಗೆ ಗಾಯ

ಶಿವಮೊಗ್ಗ,ಜೂ.೨೧: ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಹಾಕಿದ್ದ ರೌಡಿ ಶಾಹಿದ್ ಖುರೇಶಿ(೨೨)ಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಉಪಟಳದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳವಾರ ಬೆಳಗ್ಗೆ ಆತನನ್ನು ಹಿಡಿಯಲು ಹೋದ ಸಂದರ್ಭ ಆತ ಪೊಲೀಸರ ಮೇಲೆ ಎರಗಿದ್ದು, ಈ ವೇಳೆ ಗುರುನಾಯ್ಕ್ ಎಂಬ ಪೊಲೀಸ್ ಪೇದೆ ಎದೆಗೆ ಚಾಕುವಿನಿಂದ ಚುಚ್ಚಿದ್ದ. ಈ ವಿಚಾರ ಪೊಲೀಸ್ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಗಾಯಾಳು ಪೇದೆಯನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮಧ್ಯಾಹ್ನ ಖುರೇಶಿಯನ್ನು ಬಂಧಿಸಲು ಹೋದ ಸಂದರ್ಭ ಆತ ಮತ್ತೆ ಪೊಲೀಸರ ಮೇಲೆ ಲಾಂಗು ಬೀಸಲು ಮುಂದಾದ ಈ ಸಂದರ್ಭ ಆತ್ಮ ರಕ್ಷಣೆಗೆ ಮುಂದಾದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ.

Ad Widget

Related posts

ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk

ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ

Malenadu Mirror Desk

ಚುನಾವಣೆ ಮುಂದೂಡಲು ಕಿಮ್ಮನೆ ಪತ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.