Malenadu Mitra
ರಾಜ್ಯಶಿವಮೊಗ್ಗಸಾಗರ

ಸಾಗರ-ಜೋಗ ನಡುವೆ ಭೀಕರ ಅಪಘಾತ ಒಬ್ಬ ಸಾವು , ಐವರು ಗಂಭೀರ

ಸಾಗರ,-ಜೋಗ ನಡುವಿನ ಆಲಳ್ಳಿ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ

ಮಾರುತಿ ಇಕೊ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿದೆ. ಸತ್ತವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರೆನ್ನಲಾಗಿದೆ.

ಮೃತ ಒಬ್ಬ ವ್ಯಕ್ತಿಯನ್ನು ಚನ್ನಗಿರಿಯ ಶಾಭಾಜ್(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿ (14),ತಬಸ್ಸುಮ್(23),
ಶಿಫಾ(27),ಖಮರುನ್ನಿಸಾ(45),ಜಬ್ರುನ್(55),ಮಹಮ್ಮದ್ ಉಸ್ಮಾನ್(25)
ಸೇರಿ 6 ಮಂದಿ ಪ್ರಯಾಣಿಸುತ್ತದ್ದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ,ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು,ಜೋಗ ಜಲಪಾತ ವೀಕ್ಷಿಸಿ ವಾಪಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿದ್ದಾರೆ.

Ad Widget

Related posts

ಹಿಂದೂಗಳ ಮೇಲಿನ ದೌರ್ಜನ್ಯ ಕೊನೆಗಾಣಬೇಕು: ಸಂಸದ ರಾಘವೇಂದ್ರ ಆಗ್ರಹ

Malenadu Mirror Desk

ಅವೈಜ್ಞಾನಿಕ ನೀರಿನ ಬಿಲ್ ಕಟ್ಟಬೇಡಿ: ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ

Malenadu Mirror Desk

ಮಧ್ಯರಾತ್ರಿ ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು ಕೋಮು ಭಾವನೆ ಕೆರಳಿಸುವ ಹುನ್ನಾರ ಎಂದ ಸಚಿವರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.