Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ಚಾಕು ಇರಿತದ ಆರೋಪಿಗೆ ಗುಂಡೇಟು ನಾಲ್ರರ ಬಂಧನ

ಶಿವಮೊಗ್ಗಲ್ಲಿ ಫ್ಲೆಕ್ಸ್ ವಿಚಾರಕ್ಕೆ ಆದ ಗಲಾಟೆ ಬಳಿಕ ಅಮಾಯಕ ಯುವಕನ ಮೇಲೆ ಚಾಕು ಇರಿದಿದ್ದರೆನ್ನಲಾದ ಆರೋಪಿಯ ಮೇಲೆ ಗುಂಡು ಹಾರಿಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಬಿ ಆಲಿಯಾಸ್ ಚರ್ಬಿಯನ್ನು ಎನ್.ಟಿ ರಸ್ತೆ ಬಳಿ ಬಂಧಿಸಲು ಹೋದಾಗ ಪೊಲೀಸರ ಮೇಲೆ ಆತ ಹಲ್ಲೆ ಮಾಡಲು ಮುಂದಾದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಬಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ಪ್ರೇಮ್‌ಸಿಂಗ್ ಮೇಲೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಸಿ.ನಗರದ ನದೀಮ್(೨೫) ಬುದ್ದನಗರದ ಅಬ್ದುಲ್ ರೆಹಮಾನ್(೨೫) ಸೇರಿದಂತೆ
ಆರೋಪಿಗಳು ಸೋಮವಾರ ಉಪ್ಪಾರ ಕೇರಿ ಬಳಿ ಪ್ರೇಮ್ ಸಿಂಗ್ ಮೇಲೆ ಚಾಕುವಿನಿಂದ ಇರಿದ ಕಾರಣ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸ್ವಾತಂತ್ರ್ಯದ ಅಮೃತಮಹೋತ್ಸವ ಸಮಾರಂಭದ ಸಂದರ್ಭ ಶಿವಪ್ಪನಾಯಕ ವೃತ್ತದಲ್ಲಿ ಅಳವಡಿಸಿದ್ದ ವೀರಸಾವರ್ಕರ್ ಪ್ಲೆಕ್ಸ್ ತೆರವುಗೊಳಿಸಿದ್ದರಿಂದ ಎರಡು ಕೋಮಿನ ನಡುವೆ ವಾಗ್ವಾದ ಆಗಿತ್ತು. ಈ ಸಂದರ್ಭ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

Ad Widget

Related posts

ಸರ್ಕಾರ ಹಿಂದುಳಿದ ಸಮಾಜಕ್ಕೆ ಅನುದಾನವನ್ನು ಬಿಡುಗಡೆ ಮಾಡಿಲ್ಲ: ಕಾಂಗ್ರೆಸ್

Malenadu Mirror Desk

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಸಚಿವರಿಗೆ ಮನವಿ

Malenadu Mirror Desk

ಕನ್ನಡ ವಿದ್ಯಾರ್ಥಿಗಳಿಗೆ ವರವಾದ ಪ್ರಿಪೇರ್ ಎಜುಟೆಕ್ App

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.