Malenadu Mitra
ರಾಜ್ಯಶಿವಮೊಗ್ಗ

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

ತುಮರಿ,ಸೆ.23: ಕರೂರು ಹೋಬಳಿಯ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಮಹಿಳಾ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಉತ್ಸವ ನಡೆಯಲಿದ್ದು, ಈ ಸಂದರ್ಭ ಮಹಿಳಾ ಸಂಘದ ಸದಸ್ಯೆಯರು ಸ್ಥಳೀಯರೊಡಗೂಡಿ ದೇವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಈ ಸಂದರ್ಭ ಭಕ್ತರು ಮತ್ತು ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಲಾಯಿತು,. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ವೀರೇಶ್ ಮೊದಲಾದ ಸಿಬ್ಬಂದಿಗಳು, ಮಹಿಳಾ ಸಂಘದ ಅಧ್ಯಕ್ಷೆ ಸಂಧ್ಯಾ ಸಿಗಂದೂರು, ಕಾರ್ಯದರ್ಶಿ ಪದ್ಮಾವತಿ, ಸದಸ್ಯರಾದ ಲಕ್ಷ್ಮಿದೇವರಾಜ್, ಸುಮಿತ್ರಾ, ನಾಗರತ್ನಮ್ಮ , ವಿಮಲಾ ,ಹಾಗು ನೇತ್ರಾವತಿ, ಸುಮಿತ್ರಾ, ಹಾಲಮ್ಮ ಮತ್ತಿತರರು ಹಾಜರಿದ್ದರು.

Ad Widget

Related posts

ಡಿಜಿಟಲ್ ಮೀಡಿಯಾದಿಂದ ಯುವಕರಿಗೆ ಉತ್ತಮ ಭವಿಷ್ಯ , ಮುಖ್ಯಮಂತ್ರಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಅಭಿಪ್ರಾಯ

Malenadu Mirror Desk

ಬಿ.ವೈ ವಿಜಯೇಂದ್ರಗೆ ಅದ್ದೂರಿ ಸ್ವಾಗತ, ಈಶ್ವರಪ್ಪ-ಸಂಘದ ಪ್ರಮುಖರ ಮನೆಗೆ ಭೇಟಿ:ತೆರೆದ ವಾಹನದಲ್ಲಿ ಮೆರವಣಿಗೆ

Malenadu Mirror Desk

ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರ ಬೇಡ: ಎನ್.ಎಸ್.ಯು.ಐ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.