Malenadu Mitra
ರಾಜ್ಯಶಿವಮೊಗ್ಗ

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

ತುಮರಿ,ಸೆ.23: ಕರೂರು ಹೋಬಳಿಯ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಮಹಿಳಾ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಉತ್ಸವ ನಡೆಯಲಿದ್ದು, ಈ ಸಂದರ್ಭ ಮಹಿಳಾ ಸಂಘದ ಸದಸ್ಯೆಯರು ಸ್ಥಳೀಯರೊಡಗೂಡಿ ದೇವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಈ ಸಂದರ್ಭ ಭಕ್ತರು ಮತ್ತು ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಲಾಯಿತು,. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ವೀರೇಶ್ ಮೊದಲಾದ ಸಿಬ್ಬಂದಿಗಳು, ಮಹಿಳಾ ಸಂಘದ ಅಧ್ಯಕ್ಷೆ ಸಂಧ್ಯಾ ಸಿಗಂದೂರು, ಕಾರ್ಯದರ್ಶಿ ಪದ್ಮಾವತಿ, ಸದಸ್ಯರಾದ ಲಕ್ಷ್ಮಿದೇವರಾಜ್, ಸುಮಿತ್ರಾ, ನಾಗರತ್ನಮ್ಮ , ವಿಮಲಾ ,ಹಾಗು ನೇತ್ರಾವತಿ, ಸುಮಿತ್ರಾ, ಹಾಲಮ್ಮ ಮತ್ತಿತರರು ಹಾಜರಿದ್ದರು.

Ad Widget

Related posts

ಅಮಿತ್ ಶಾ ಆಗಮನ:ತಯಾರಿ ಪರಿಶೀಲನೆ

Malenadu Mirror Desk

ಶಿಕಾರಿಪುರ ಮತದಾರನ ನಿಲುವು ನಿಗೂಢ
ಕಾಂಗ್ರೆಸ್ ಮಂಕು, ಗೌಡರ ಗರ್ಜನೆಗೆ ಬೆದರೀತೆ ಬಿಜೆಪಿ

Malenadu Mirror Desk

ನಿರ್ಮಲ ತುಂಗಾಭದ್ರಾ ಅಭಿಯಾನ : ನಾಳೆ ಶಿವಮೊಗ್ಗದಲ್ಲಿ ‘ತುಂಗಾ ಆರತಿ’

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.