Malenadu Mitra
ರಾಜ್ಯ

ಜಾತಿ ವ್ಯವಸ್ಥೆಯಿಂದ ಹೊರ ಬರುವಂತೆ ಕನಕದಾಸರು ಸಾರಿದ್ದರು : ಕೆ.ಎಸ್ ಈಶ್ವರಪ್ಪ



ಶಿವಮೊಗ್ಗ :  ನಮ್ಮ ಸಮಾಜದಿಂದ ಕುಲವೆಂಬುದನ್ನು ತೆಗೆದು ಹಾಕಿ, ಜಾತಿ ವ್ಯವಸ್ಥೆಯಿಂದ ಹೊರ ಬರಬೇಕೆಂದು ಕನಕದಾಸರು ಸುಮಾರು ೫೩೫ ವರ್ಷಗಳ ಹಿಂದೆಯೇ  ಸಾರಿದ್ದರು ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುರುಬರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಮಾನವ, ಸಂತ ಹಾಗೂ ಶ್ರೇಷ್ಟ ಕವಿ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ, ಕುಲದಿಂದ ಹೊರ ಬರಬೇಕು ಎಂದ ಅವರು ಹಿಂದುತ್ವದ ಮೊದಲ ಪ್ರತಿಪಾದಕರಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ. ಆದರೆ ಇಂದಿಗೂ ಜಾತಿ ವ್ಯವಸ್ಥೆ ಮುಂದುವರೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪ್ರಪಂಚ ಇದನ್ನು ಗೌರವಿಸುವುದಿಲ್ಲ. ಇದೇ ವ್ಯವಸ್ಥೆ ಮುಂದುವರಿದರೆ ಸಾಮಾಜಿಕ ನ್ಯಾಯಕ್ಕೆ ಬೆಲೆ ಇಲ್ಲದ ಹಾಗೆ ಆಗುತ್ತದೆ. ಆದ್ದರಿಂದ ನಾವುಗಳು ಕನಕದಾಸರಂತಹ ಮಹಾನ್ ಪುರುಷರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು, ಒಟ್ಟಾಗಿ ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಕರೆ ನೀಡಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ ಎನ್ನುವ ಮೂಲಕ ಜಾತಿ ವ್ಯವಸ್ಥೆಯಿಂದ ಹೊರ ಬಂದು ಮಾನವ ಕುಲ ಒಂದೇ ಎಂಬ ಚಿಂತನೆ ನೀಡಿದ್ದು ಅದನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಕನಕದಾಸರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ

ಕಾಗಿನೆಲೆ ಶ್ರೀಗಳು ಕನಕದಾಸ ರ ಜಯಂತಿಯಂದು ಎಲ್ಲರೂ ಸಕ್ರಿಯವಾಗಿ ಸರ್ಕಾರದ ಕೆಲಸಗಳನ್ನು ಮಾಡೋಣ. ಆದ್ದರಿಂದ ರಜೆ ಬೇಡವೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದರು.  ಇಂದು ವೀರ ಮಹಿಳೆ ಒನಕೆ ಓಬವ್ವರವರ ಜಯಂತಿ ಸಹ ಇದೆ. ಮಹಿಳಾ ಧ್ವನಿಯಾದ ಶೌರ್ಯವಂತೆ ಓಬವ್ವರವರು ಶತ್ರುಗಳ ವಿರುದ್ದ ದಿಟ್ಟತನದಿಂದ ಹೋರಾಡಿ ನಮಗೆಲ್ಲ ಮಾದರಿಯಾಗಿದ್ದಾರೆ. ಇಂತಹ ಮಹಾನ್  ಚೇತನಗಳ ವೀರತನ ಮತ್ತು ತತ್ವ ಗಳನ್ನು ಅಳವಡಿಸಿಕೊಳ್ಳೋಣ ಎಂದರು.

ಮಾಜಿ ವಿಧಾನ ಪರಿಷತ್ ಶಾಸಕ ಪ್ರಸನ್ನ ಕುಮಾರ್ ಮಾತನಾಡಿ, ದಾಸರ ತತ್ವಗಳನ್ನು ಅವಲೋಕಿಸಿ, ಅಳವಡಿಸಿಕೊಂಡು ಜಾತಿ ವ್ಯವಸ್ಥೆಯಿಂದ ಹೊರ ಬಂದು ಒಟ್ಟಾಗಿ ಹೋಗೋಣ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರನಾಯ್ಕ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಪಾಲಿಕೆ ಸದಸ್ಯರು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ ಪಿ ಮಿಥುನ್ ಕುಮಾರ್, ಎಡಿಸಿ ನಾಗೇಂದ್ರ ಹೊನ್ನಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಸಮಾಜದ ಮುಖಂಡರು ಹಾಜರಿದ್ದರು.

Ad Widget

Related posts

ಬಡವರ ಜೀವನ ನಿರ್ವಹಣೆಗೆ ಸರಕಾರ ನೆರವಾಗಲಿ

Malenadu Mirror Desk

17 ಮನೆ ಕುಸಿತ,9 ಕಾಳಜಿ ಕೇಂದ್ರ, ಅಧಿಕಾರಿಗಳೊಂದಿಗೆ ಶೀಘ್ರ ಸಭೆ ಸ್ಥಳ ಪರಿಶೀಲಿಸಿದ ನಂತರ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk

ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.